ಬಾಂಗ್ಲಾದೇಶದಲ್ಲಿ ಬುಲ್ಬುಲ್ ಅಬ್ಬರ : ಸಾವಿನ ಸಂಖ್ಯೆ 26ಕ್ಕೇರಿಕೆ
ಮಾಸ್ಕೋ, ನವೆಂಬರ್ 12 : ಬಾಂಗ್ಲಾದೇಶದ ಪ್ರಬಲ ಚಂಡಮಾರುತ ಬಲ್ಬುಲ್ನಿಂದ ಸಾವನ್ನಪ್ಪಿದವರ ಸಂಖ್ಯೆ 26 ಕ್ಕೆ ಏರಿದೆ ಎಂದು ಸ್ಥಳೀಯ ಪತ್ರಿಕೆ ಡೈಲಿ ಸ್ಟಾರ್ ವರದಿ ಮಾಡಿದೆ. ಮುಖ್ಯವಾಗಿ ಬಲವಾದ ಗಾಳಿಯಿಂದ ಬಿದ್ದ ಮರಗಳಿಂದ ಅಧಿಕ ಸಾವುಗಳು ಸಂಭವಿಸಿವೆ. ಮತ್ತೆ ಕೆಲವರು ನೀರಿನಲ್ಲಿ ಮುಳುಗಿ, ಕೆಲವರು ಮನೆಗಳ ಕುಸಿತದ ಪರಿಣಾಮವಾಗಿ ಸಾವನ್ನಪ್ಪಿದ್ದಾರೆ. ಒಟ್ಟು 51 ಮೀನುಗಾರರು ಕಾಣೆಯಾಗಿರವ ವರದಿಯಾಗಿದೆ.ಚಂಡಮಾರುತದ ಎಚ್ಚರಿಕೆಯ ಹೊರತಾಗಿಯೂ ಮೀನುಗಾರರು ಸಮುದ್ರಕ್ಕೆ ಇಳಿದ ಪರಿಣಾಮ ಅವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಕ್ಷಣಾ ಸಿಬ್ಬಂದಿ ಈವರೆಗೂ 2.16 ಮಿಲಿಯನ್ ಜನರನ್ನು ಯಶಸ್ವಿಯಾಗಿ ಸ್ಥಳಾಂತರಿಸಿದ್ದಾರೆ ಮತ್ತು ಅವರನ್ನು ವಿಶೇಷವಾಗಿ ಸಿದ್ಧಪಡಿಸಿದ ಆಶ್ರಯಕ್ಕೆ ಕರೆತಂದಿದ್ದಾರೆ ಎಂದು ವಿಪತ್ತು ನಿರ್ವಹಣೆ ಮತ್ತು ಪರಿಹಾರ ರಾಜ್ಯ ಸಚಿವ ಎನಾಮೂರ್ ರಹಮಾನ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 