ಬಸ್ ಪಲ್ಟಿ ಃ 20 ಜನ ಜೀವಾಪಾಯದಿಂದ ಪಾರು
ಚನ್ನಮ್ಮನ ಕಿತ್ತೂರು 10ಃ ಕಿತ್ತೂರು ಮತ್ತು ದೇಗಾಂವ ಮಾರ್ಗಮದ್ಯದ ಸವಳಮುಖ ಕ್ರಾಸ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಸ್ಕಿಯಿಂದ ಪಣಜಿಗೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಬಸ್ ಪಲ್ಟಿಯಾದ ಘಟನೆ ಸೋಮವಾರ ಸಂಜೆ ನಡೆದಿದೆ.
ರಾಯಚೂರ ವಿಭಾಗದ ಮಸ್ಕಿ ಡಿಪೋದ ಈಶಾನ್ಯ ಕರ್ನಾಟಕ ಸಾರಿಗೆ ಬಸ್ನಲ್ಲಿ 20 ಜನ ಪ್ರಯಾಣಿಸುತ್ತಿದ್ದರು. ಆದರೇ ಈ ದುರ್ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಜೀವಾಪಾಯ ಸಂಭವಿಸಿಲ್ಲ. ಆದರೇ ಬಸ್ ಚಾಲಕನಿಗೆ ಮಾತ್ರ ಗಾಯವಾಗಿದ್ದು ಸ್ಥಳಕ್ಕೆ ಕಿತ್ತೂರು ಪಿಎಸ್ಐ ಸಂಜೀವಕುಮಾರ ಕಲ್ಲೂರ ಭೇಟಿ ನೀಡಿದ್ದಾರೆ.
ಬಾಕ್ಸ ಐಟಂ :
ಈ ಸರ್ಕಾರಿ ಬಸ್ ಪಲ್ಟಿಯಾದ ಸ್ಥಳದಲ್ಲಿ ಈ ಹಿಂದೆ ಅಡುಗೆಗೆ ಬಳಸುವ ಎಣ್ಣಿಯು ಬಿದ್ದ ಪರಿಣಾಮದಿಂದ ವಾಹನಗಳೆರೆಡು ಬಿದ್ದಿದ್ದವು. ಇಷ್ಟಾದರೂ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ ಪರಿಣಾಮ ಈಗ ಸರ್ಕಾರಿ ಬಸ್ ಕೂಡ ಅಪಘಾತಕ್ಕಿಡಾಗಿದ್ದು ಇನ್ನಾದರೂ ಅಧಿಕಾರಿಗಳು ಇದನ್ನು ಸರಿ ಪಡಿಸುವರೇ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 