ಮೆಜೆಸ್ಟಿಕ್ ನಲ್ಲಿ ಬಸ್ಸು ಡಿಕ್ಕಿ: ವ್ಯಕ್ತಿ ಸಾವು
ಬೆಂಗಳೂರು, ಮೇ 4,ನಗರದ ಮೆಜೆಸ್ಟಿಕ್ ಬಸ್ಸು ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ವ್ಯಕ್ತಿ ಮೃತಪಟ್ಟಿರುವ ಘಟನೆ ಫ್ಲಾಟ್ ಫಾರಂ ನಂಬರ್ 15ರಲ್ಲಿ ಸಂಭವಿಸಿದೆ.ಕೊಪ್ಪಳ ಘಟಕ ಬಸ್ಸು ಇದಾಗಿದ್ದು, ಲಾಕ್ಡೌನ್ ಸಡಿಲಿಕೆಯಾದ ಪರಿಣಾಮ ಸಾವಿರಾರು ಜನರು ಮೆಜೆಸ್ಟಿಕ್ ಬಸ್ಸು ನಿಲ್ದಾಣದಲ್ಲಿ ಸೇರಿಕೊಂಡಿದ್ದರು. ಹೀಗಾಗಿ ಜನದಟ್ಟಣೆಯಾದ ಪರಿಣಾಮ ಬಸ್ಸು ನಿಲ್ದಾಣದಲ್ಲಿ ಹೊರಡುತ್ತಿದ್ದಾಗ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.ಡಿಕ್ಕಿಯ ರಭಸಕ್ಕೆ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಚಾಲಕ ಪರಾರಿಯಾಗಿದ್ದಾನೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 