ಬಸ್ ಪಲ್ಟಿ : ಆರು ಜನರಿಗೆ ಗಂಭೀರ ಗಾಯ

ಬೆಳಗಾವಿ 17: ಹಂದಿಗುಂದ ಸಮೀಪದ ಕಪ್ಪಲಗುದ್ದಿ ಕ್ರಾಸ್‌ನಲ್ಲಿ ಮುಧೋಳ-ನಿಪ್ಪಾಣಿ ಹೆದ್ದಾರಿ ಬಳಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಪಟ್ಟಿಯಾದ ಪರಿಣಾಮ ಚಾಲಕ ಮತ್ತು ನಿರ್ವಾಹಕ ಸೇರಿ ಆರು ಜನ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಬಸ್ಸಿನಲ್ಲಿ 65 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಎದುರಿನಿಂದ ವೇಗವಾಗಿ ಬಂದ ಲಾರಿಯನ್ನು ತಪ್ಪಿಸಲು ಹೋದಾಗ ಬಸ್ ರಸ್ತೆ ಬದಿ ಪಲ್ಟಿಯಾಗಿದೆ. ಗಾಯಾಳುಗಳು ಮೂಡಲಗಿ, ಮಹಾಲಿಂಗಪುರ, ಗೋಕಾಕ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾರೂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.