ಇಡೇರಿದ 3 ದಶಕದ ಬೇಡಿಕೆ, ಜಿಲ್ಲಾ ಕೇಂದ್ರಕ್ಕೆ ಬಸ್ ಸಂಚಾರ.
Bus service to the district center, a demand that has been growing for 3 decades.
ಇಡೇರಿದ 3 ದಶಕದ ಬೇಡಿಕೆ, ಜಿಲ್ಲಾ ಕೇಂದ್ರಕ್ಕೆ ಬಸ್ ಸಂಚಾರ.
ಆಲಮೇಲ 05: ತಾಲ್ಲೂಕಿನ ಕೊನೆಯ ಹಳ್ಳಿಯಾದ ಕಡಣಿ ಗ್ರಾಮದಿಂದ ಜಿಲ್ಲಾ ಕೇಂದ್ರ ವಿಜಯಪುರಕ್ಕೆ ಬಸ್ ಸಂಚಾರ ಗುರುವಾರ ಪ್ರಾರಂಭವಾಯಿತು. ಗ್ರಾಮಸ್ಥರಲ್ಲಿ ಸಂತೋಷದಿಂದ ಬಸ್ ಬರಮಾಡಿಕೊಂಡು, ಬಸ್ ಅಲಂಕರಿಸಿ ಸಿಹಿಹಂಚಿ ಖುಷಿಪಟ್ಟರು.ಚಾಲಕ ಮತ್ತು ನಿರ್ವಾಹಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಇತ್ತೀಚೆಗೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕಡಣಿ ಗ್ರಾಮದ ನೂತನ ಪಂಚಾಯತಿ ಕಟ್ಟಡ ಉದ್ಘಾಟನೆಗೆ ಬಂದಾಗ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಈ ಬಗ್ಗೆ ಮಾತನಾಡಿದ ಗ್ರಾಮ ಪಂಚಾಯತಿ ಅಧ್ಯಕ್ಷ ಬಸಲಿಂಗಪ್ಪ ಕತ್ತಿ ’ಬಹಳ ದಿನಗಳ ಬೇಡಿಕೆ ಇತ್ತು, ಆರೋಗ್ಯ, ಶಿಕ್ಷಣಕ್ಕಾಗಿ ಈ ಸೇವೆ ಬಹಳ ಮುಖ್ಯವಾಗಿತ್ತು , ಶಾಸಕರು ಹಾಗೂ ಸಚಿವರಿಗೆ ಆಭಾರಿಯಾಗಿದ್ದೇವೆ ಎಂದರು.ಸದಸ್ಯರಾದ ಬಸವರಾಜ ತಾವರಗೇರಿ, ಮುಖಂಡರಾದ ವೀರಭದ್ರ ಕತ್ತಿ , ಸಂತೋಷ ಕ್ಷತ್ರಿ, ಈರಣ್ಣ ಸುತಾರ, ಕಲ್ಲಪ್ಪ ದಳಪತಿ ಮೊದಲಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 