ಧಾರವಾಡದಲ್ಲಿ ಸೋಮವಾರದಿಂದ ವಾಣಿಜ್ಯ ವಹಿವಾಟು : ಜಗದೀಶ್ ಶೆಟ್ಟರ್
ಧಾರವಾಡ, ಮೇ 10, ಧಾರವಾಡ ಜಿಲ್ಲೆಯಲ್ಲಿ ಸೋಮವಾರದಿಂದ ವಾಣಿಜ್ಯ ವಹಿವಾಟು ನಡೆಸಲು ಅವಕಾಶ ಮಾಡಿಕೊಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲಾಕ್ಡೌನ್ ನಿಯಂತ್ರಣ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ಹುಬ್ಬಳ್ಳಿ ನಗರ ಹೊರತುಪಡಿಸಿ ಜಿಲ್ಲೆಯಾದ್ಯಂತ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗಿದೆ. ಸೋಮವಾರದಿಂದ ಸೀಲ್ಡೌನ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಡೆ ವಾಣಿಜ್ಯ ವಹಿವಾಟು ನಡೆಸಲು ಆದೇಶ ಹೊರಡಿಸಲಾಗುವುದು ಎಂದು ಅವರು ಹೇಳಿದರು. ಮಾಲ್, ಮಾರುಕಟ್ಟೆ ಸಂಕೀರ್ಣ, ಬಾರ್ ಅಂಡ್ ರೆಸ್ಟೋರೆಂಟ್, ಜಿಮ್, ಧಾರ್ಮಿಕ ಚಟುವಟಿಕೆಗಳು, ಸಭೆ ಸಮಾರಂಭಗಳ ಮೇಲಿನ ನಿರ್ಬಂಧ ಮುಂದುವರೆಯಲಿದೆ. ಈಗಾಗಲೇ ಜಿಲ್ಲೆಯಲ್ಲಿ ಶೇ.25ರಷ್ಟು ಕೈಗಾರಿಕಾ ಚಟುವಟಿಕೆಗಳು ಪುನರಾರಂಭವಾಗಿದೆ ಎಂದು ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 