ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮೂಲಕ ಕ್ರೀಡಾ ತರಬೇತಿದಾರರಿಗೆ ನ್ಯಾಯ ಒದಗಿಸಲು ಕ್ರಮ
ಬೆಳಗಾವಿ: 14 :ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವ ಮೂಲಕ ಕನರ್ಾಟಕ ಕ್ರೀಡಾ ಪ್ರಾಧಿಕಾರದಲ್ಲಿ ಮಾಸಿಕ ಸಂಚಿತ ವೇತನ ಆಧಾರದಲ್ಲಿ ಸೇವೆ ಮಾಡುತ್ತಿರುವ 136 ತರಬೇತುದಾರರ ಸೇವಾ ಸಕ್ರಮ ಮಾಡಿಕೊಳ್ಳಲಾಗುವ ಪ್ರಕ್ರಿಯೆ ಸಕರ್ಾರದ ಪರಿಶೀಲನೆಯಲ್ಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ವಿಧಾನಪರಿಷತ್ತಿನಲ್ಲಿ ಹೇಳಿದರು.
ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಅರುಣ ಶಹಾಪೂರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕನರ್ಾಟಕ ಕ್ರೀಡಾ ಪ್ರಾಧಿಕಾರದಲ್ಲಿ 12 ಹಿರಿಯ ತರಬೇತುದಾರರು, 104 ತರಬೇತುದಾರರು ಹಾಗೂ 20 ಕಿರಿಯ ತರಬೇತುದಾರರು ಸೇರಿ ಒಟ್ಟು 136 ತರಬೇತಿದಾರರು ಮಾಸಿಕ ಸಂಚಿತ ವೇತನದ ಆಧಾರದಲ್ಲಿ ಸೇವೆ ಮಾಡುತ್ತಿದ್ದಾರೆ.ಅವರ ಶೈಕ್ಷಣಿಕ,ಕ್ರೀಡಾ ಅರ್ಹತೆ ಹಾಗೂ ಸಾಧನೆ ಆಧರಿಸಿ 26 ಸಾವಿರ, 31 ಸಾವಿರ ,39 ಸಾವಿರ ಹಾಗೂ 70 ಸಾವಿರ ರೂ.ಮಾಸಿಕ ಸಂಚಿತ ವೇತನ ನೀಡಲಾಗುತ್ತಿದೆ.
ಕೆಲವರು 1500 ರಿಂದ 2500 ರೂ.ಗಳ ವೇತನದೊಂದಿಗೆ 20-25 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ತರಬೇತಿದಾರರ ಪ್ರಾಮುಖ್ಯತೆಯ ಅರಿವು ಸ್ವತಃ ತಮಗೆ ಇದೆ.ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ, ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾದ ಸದಸ್ಯನೂ ತಾನಾಗಿದ್ದೇನೆ ಎಂದ ಉಪಮುಖ್ಯಮಂತ್ರಿಗಳು.ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ 2018-19 ನೇ ಸಾಲಿನಲ್ಲಿ 220.23 ಕೋಟಿ ರೂ.ಅನುದಾನ ಒದಗಿಸಲಾಗಿದೆ.ಕನರ್ಾಟಕ ಕ್ರೀಡಾ ಪ್ರಾಧಿಕಾರಕ್ಕೆ 16.25 ಕೋಟಿ ರೂ.ಒದಗಿಸಲಾಗಿದೆ ಎಂದು ವಿವರಿಸಿದರು.
ಸದಸ್ಯರಾದ ಬಸವರಾಜ ಹೊರಟ್ಟಿ,ಹೆಚ್.ಎಂ.ರೇವಣ್ಣ ಚಚರ್ೆಯಲ್ಲಿ ಭಾಗವಹಿಸಿ ಬಿಪಿಇಡಿ,ಎಂಪಿಇಡಿ ,ಎನ್.ಐ.ಎಸ್.ಪದವೀಧರರಿಗೆ ಸೂಕ್ತ ಪ್ರೋತ್ಸಾಹ ನೀಡಿದರೆ ಕ್ರೀಡಾರಂಗಕ್ಕೆ ಉತ್ತೇಜನ ಸಿಗಲು ಸಾಧ್ಯ ಎಂದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 