ಸಿಎಎ ವಿರೋಧಿ ಪ್ರತಿಭಟನೆ ದೇಶದ್ರೋಹವಲ್ಲ ಹೈಕೋರ್ಟ್ ಅಭಿಪ್ರಾಯ
ಮುಂಬೈ, ಫೆ15, ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರನ್ನು 'ದೇಶದ್ರೋಹಿ'ಗಳೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟಿನ ಔರಂಗಾಬಾದ್ ಪೀಠ ಅಭಿಪ್ರಾಯಪಟ್ಟಿದೆ. ಬೀಡ್ ಜಿಲ್ಲೆಯ ಮಜಲಗಾಂವ್ ಈದ್ಗಾ ಮೈದಾನದಲ್ಲಿ ಸಿಎಎ ವಿರುದ್ಧ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ್ದ ಮ್ಯಾಜಿಸ್ಟ್ರೇಟ್ ಆದೇಶ ಹಾಗೂ ಪೊಲೀಸ್ ಆದೇಶ ಪ್ರಶ್ನಿಸಿ ಇಫ್ತಿಕಾರ್ ಶೇಖ್ ಎಂಬವರು ಸಲ್ಲಿಸಿದ್ದ ಮನವಿ ವಿಚಾರಣೆ ಸಮಯದಲ್ಲಿ ಕೋರ್ಟ್ ಈ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಟಿ.ವಿ.ನಲವಡೆ ಹಾಗೂ ಎಂ.ಜಿ.ಸೇವಿಲ್ಕರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿ ಅಲ್ಲದೆ ಅಪೀಲುದಾರರಿಗೆ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಅನುಮತಿ ನೀಡಿದೆ. ಕಾಯ್ದೆ ವಿರುದ್ಧದ ತಮ್ಮ ನಿಲುವನ್ನು ವ್ಯಕ್ತ ಪಡಿಸಲು ಶಾಂತಿಯುತ ಪ್ರತಿಭಟನೆಯನ್ನಷ್ಟೇ ನಡೆಸುವುದಾಗಿ ಅರ್ಜಿದಾರರು ಮನವಿ ಮಾಡಿದ್ದಾರೆ .ಇಂತಹ ಜನರು ಕಾಯ್ದೆ ವಿರೋಧಿಸಲಿದ್ದಾರೆ ಎಂಬ ಏಕೈಕ ಕಾರಣಕ್ಕೆ ಅವರನ್ನು ದೇಶದ್ರೋಹಿಗಳು, ಅಥವಾ ದೇಶವಿರೋಧಿಗಳೆಂದು ಕರೆಯಲು ಆಗದೂ ಎಂದೂ ನ್ಯಾಯಾಲಯ ಹೇಳಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 