ಸಿಎಎ ವಿರೋಧಿ ಪ್ರತಿಭಟನೆ ದೇಶದ್ರೋಹವಲ್ಲ ಹೈಕೋರ್ಟ್ ಅಭಿಪ್ರಾಯ
ಮುಂಬೈ, ಫೆ15, ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರನ್ನು 'ದೇಶದ್ರೋಹಿ'ಗಳೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟಿನ ಔರಂಗಾಬಾದ್ ಪೀಠ ಅಭಿಪ್ರಾಯಪಟ್ಟಿದೆ. ಬೀಡ್ ಜಿಲ್ಲೆಯ ಮಜಲಗಾಂವ್ ಈದ್ಗಾ ಮೈದಾನದಲ್ಲಿ ಸಿಎಎ ವಿರುದ್ಧ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ್ದ ಮ್ಯಾಜಿಸ್ಟ್ರೇಟ್ ಆದೇಶ ಹಾಗೂ ಪೊಲೀಸ್ ಆದೇಶ ಪ್ರಶ್ನಿಸಿ ಇಫ್ತಿಕಾರ್ ಶೇಖ್ ಎಂಬವರು ಸಲ್ಲಿಸಿದ್ದ ಮನವಿ ವಿಚಾರಣೆ ಸಮಯದಲ್ಲಿ ಕೋರ್ಟ್ ಈ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಟಿ.ವಿ.ನಲವಡೆ ಹಾಗೂ ಎಂ.ಜಿ.ಸೇವಿಲ್ಕರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿ ಅಲ್ಲದೆ ಅಪೀಲುದಾರರಿಗೆ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಅನುಮತಿ ನೀಡಿದೆ. ಕಾಯ್ದೆ ವಿರುದ್ಧದ ತಮ್ಮ ನಿಲುವನ್ನು ವ್ಯಕ್ತ ಪಡಿಸಲು ಶಾಂತಿಯುತ ಪ್ರತಿಭಟನೆಯನ್ನಷ್ಟೇ ನಡೆಸುವುದಾಗಿ ಅರ್ಜಿದಾರರು ಮನವಿ ಮಾಡಿದ್ದಾರೆ .ಇಂತಹ ಜನರು ಕಾಯ್ದೆ ವಿರೋಧಿಸಲಿದ್ದಾರೆ ಎಂಬ ಏಕೈಕ ಕಾರಣಕ್ಕೆ ಅವರನ್ನು ದೇಶದ್ರೋಹಿಗಳು, ಅಥವಾ ದೇಶವಿರೋಧಿಗಳೆಂದು ಕರೆಯಲು ಆಗದೂ ಎಂದೂ ನ್ಯಾಯಾಲಯ ಹೇಳಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 