ಸಿಎಎ ವಿರುದ್ಧ ಕೇರಳದಲ್ಲಿ ಹರತಾಳ: 100ಕ್ಕೂ ಅಧಿಕ ಮಂದಿ ಬಂಧನ; ಜನಜೀವನ ಅಸ್ತವ್ಯಸ್ತ
ತಿರುವನಂತಪುರ, ಡಿ.17: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಿಂಪಡೆದುಕೊಳ್ಳಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳು ಕೇರಳದಲ್ಲಿ ಮಂಗಳವಾರ ಕರೆ ನೀಡಿರುವ ಹರತಾಳದ ವೇಳೆ ಹಿಂಸಾಚಾರ ಉಂಟಾಗಿದ್ದು, ರಾಜ್ಯದಲ್ಲಿ 100 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ.ಎಸ್ಡಿಪಿಐ, ವೆಲ್ಫೇರ್ ಪಾರ್ಟ್, ಕೇರಳ ಮುಸ್ಲಿಂ ಯೂತ್ ಫೆಡರೇಷನ್, ಬಿಎಸ್ಪಿ, ಎಸ್ಜಿಒ ಮತ್ತು ಐಕ್ಯಮತ ಸಂಘಟನೆಗಳು ಜಂಟಿಯಾಗಿ ಕರೆ ನೀಡಿರುವ ಹರತಾಳ ಹಿಂಸಾಚಾರಕ್ಕೆ ತಿರುಗಿದಾಗ ಚಳವಳಿಗಾರರು ವಾಹನಗಳ ಮೇಲೆ ಕಲ್ಲು ತೂರಿದರು. ಪರಿಣಾಮ ವೀ ಮಾರ್ಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ರಾಜ್ಯಾದ್ಯಂತ ರೈಲು ಸೇವೆ ವಿಳಂಬವಾಗಿದ್ದು, ಹಲವೆಡೆ ಖಾಸಗಿ ಬಸ್ಗಳು ರಸ್ತೆಗಿಳಿದಿಲ್ಲ.ಆದಾಗ್ಯೂ, ಸಾರಿಗೆ ಇಲಾಖೆಯ ಕೆಎಸ್ಆರ್ಟಿಸಿ ಬಸ್ ಸಂಚರಿಸುತ್ತಿದ್ದು, ಕೆಲವೆಡೆ ಪ್ರತಿಭಟನಕಾರರು ಬಸ್ ಅನ್ನು ತಡೆದು ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 