ಸಿಎಎ ದೇಶಕ್ಕೆ ಮಾರಕ: ಬಿಜೆಪಿ ಶಾಸಕ ನಾರಾಯಣ ತ್ರಿಪಾಠಿ ಉವಾಚ
ಭೋಪಾಲ್ , ಜನವರಿ 29, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವದ ಯೋಜನೆ, ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಬಿಜೆಪಿಯ ಶಾಸಕ ನಾರಾಯಣ ತ್ರಿಪಾಠಿ ಪ್ರಬಲ ವಿರೋಧ ಮಾಡಿ, ಇದು ದೇಶಕ್ಕೆ ಮಾರಕ ಎಂದು ಮುಖಕ್ಕೆ ಹೊಡೆದ ಹಾಗೆ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಕಾಯಿದೆ ವಿರುದ್ದ ದೇಶದಲ್ಲಿ ಭಾರಿ ಪ್ರತಿಭಟನೆಗಳು ನಡೆಯುತ್ತಿದೆ. ಈ ಪ್ರತಿಭಟನೆಗಳಿಗೆ ವಿರುದ್ಧವಾಗಿ ಬಿಜೆಪಿಯೂ ಸಮಾವೇಶ ನಡೆಸುತ್ತಿರುವಾಗಲೇ ಮಧ್ಯಪ್ರದೇಶದ ಬಿಜೆಪಿಯ ಶಾಸಕರೊಬ್ಬರು ಇದು ದೇಶಕ್ಕೆ ಮಾರಕವಾಗಲಿದೆ ಎಂದೂ ಆತಂಕ, ಆಕ್ಷೇಪ ವ್ಯಕ್ತಪಡಿಸಿದ್ದಾರೆ .
ಬಿಜೆಪಿ ಶಾಸಕ ನಾರಾಯಣ ತ್ರಿಪಾಠಿ ಸ್ವಪಕ್ಷದ ಸರಕಾರ, ನಾಯಕರ ವಿರುದ್ದವೇ ತಿರುಗಿ ಬಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿದ್ದಾರೆ. ದೇಶದ ಬೀದಿ ಬೀದಿಗಳಲ್ಲಿ ಆಂತರಿಕ ಯುದ್ದ ನಡೆಯುತ್ತಿದೆ. ಆದರೆ ಇದು ದೇಶಕ್ಕೆ ಮಾರಕ. ಇಂತಹ ಆಂತರಿಕ ಯುದ್ಧದ ಸಮಯದಲ್ಲಿ ದೇಶದ ಅಭಿವೃದ್ಧಿಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದೂ ತ್ರಿಪಾಠಿ ಅಭಿಪ್ರಾಯ ಪಟ್ಟಿದ್ದಾರೆ. ನಾವು ದೇಶದ ಸಂವಿಧಾನದ ಪ್ರಕಾರ ದೇಶ ನಡೆಸಬೇಕು. ಇಲ್ಲವಾದರೆ ಬಿಜೆಪಿ ಹೊಸ ಸಂವಿಧಾನ ಜಾರಿಗೆ ತರಲಿ ಎಲ್ಲರಿಗೂ ಸಮಾನತೆ ನೀಡುವ ಅಂಬೇಡ್ಕರ್ ರಚಿತ ಸಂವಿಧಾನ ಹರಿದು ಬಿಸಾಡಲಿ ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಸಾಧ್ಯವಿಲ್ಲ, ಅವಕಾಶವೂ ಇಲ್ಲ ಎಂದೂ ಅವರು ತಿರುಗೇಟು ನೀಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 