ಕೊರೊನಾ ಭೀತಿ: ವಿದೇಶ ಪ್ರವಾಸ ರದ್ದುಪಡಿಸಿದ ಚಿತ್ರತಂಡ
ಬೆಂಗಳೂರು, ಮಾ.3, ಕೊರೊನಾ ಭೀತಿ ಸ್ಯಾಂಡಲ್ ವುಡ್ ಚಿತ್ರಕ್ಕೂ ತಟ್ಟಿದೆ.ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯಿಸುತ್ತಿರುವ ಯುವರತ್ನ ಚಿತ್ರದ ಚಿತ್ರೀಕರಣ ವಿದೇಶದಲ್ಲಿ ನಡೆಯಬೇಕಿತ್ತು.ಇದೇ ತಿಂಗಳು 3ರಿಂದ 7ರವರೆಗೆ ವಿದೇಶದಲ್ಲಿ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಮಾಡಿಕೊಂಡಿತ್ತು. ಅಲ್ಲದೇ, ಮುಂಗಡವಾಗಿ ಸ್ಲೋವೆನಿಯಾದಲ್ಲಿ ಹೋಟೆಲ್ ಕೂಡ ಬುಕ್ ಮಾಡಿಕೊಂಡಿತ್ತು. ಆದರೀಗ, ಕೊರೊನಾ ಭೀತಿಯಿಂದ ಚಿತ್ರತಂಡ ಚಿತ್ರೀಕರಣಕ್ಕೆ ತೆರಳಲು ಹಿಂದೇಟು ಹಾಕಿದೆ ಎನ್ನಲಾಗಿದೆ.ಸಂತೋಷ್ ಆನಂದ್ರಾಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಟಾಲಿವುಡ್ ಮೂಲಕ ಬಣ್ಣದಲೋಕ ಪ್ರವೇಶಿಸಿದ್ದ ಸಯೇಷಾ ಸೈಗಲ್ ಪುನೀತ್ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ.ಚಿತ್ರಕ್ಕೆ ವಿಜಯ್ ಕಿರಗಂದೂರ್ ಬಂಡವಾಳ ಹೂಡಿದ್ದು, ಎಸ್. ತಮನ್ ಸಂಗೀತ ಸಂಯೋಜಿಸಿದ್ದಾರೆ.ಇನ್ನು ಚಿತ್ರಕ್ಕೆ ವೆಂಕಟೇಶ್ ಅಂಗುರಾಜ್ ಅವರ ಛಾಯಾಗ್ರಹಣವಿದೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 