ಕೊರೊನಾ ಭೀತಿ: ವಿದೇಶ ಪ್ರವಾಸ ರದ್ದುಪಡಿಸಿದ ಚಿತ್ರತಂಡ
ಬೆಂಗಳೂರು, ಮಾ.3, ಕೊರೊನಾ ಭೀತಿ ಸ್ಯಾಂಡಲ್ ವುಡ್ ಚಿತ್ರಕ್ಕೂ ತಟ್ಟಿದೆ.ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯಿಸುತ್ತಿರುವ ಯುವರತ್ನ ಚಿತ್ರದ ಚಿತ್ರೀಕರಣ ವಿದೇಶದಲ್ಲಿ ನಡೆಯಬೇಕಿತ್ತು.ಇದೇ ತಿಂಗಳು 3ರಿಂದ 7ರವರೆಗೆ ವಿದೇಶದಲ್ಲಿ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಮಾಡಿಕೊಂಡಿತ್ತು. ಅಲ್ಲದೇ, ಮುಂಗಡವಾಗಿ ಸ್ಲೋವೆನಿಯಾದಲ್ಲಿ ಹೋಟೆಲ್ ಕೂಡ ಬುಕ್ ಮಾಡಿಕೊಂಡಿತ್ತು. ಆದರೀಗ, ಕೊರೊನಾ ಭೀತಿಯಿಂದ ಚಿತ್ರತಂಡ ಚಿತ್ರೀಕರಣಕ್ಕೆ ತೆರಳಲು ಹಿಂದೇಟು ಹಾಕಿದೆ ಎನ್ನಲಾಗಿದೆ.ಸಂತೋಷ್ ಆನಂದ್ರಾಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಟಾಲಿವುಡ್ ಮೂಲಕ ಬಣ್ಣದಲೋಕ ಪ್ರವೇಶಿಸಿದ್ದ ಸಯೇಷಾ ಸೈಗಲ್ ಪುನೀತ್ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ.ಚಿತ್ರಕ್ಕೆ ವಿಜಯ್ ಕಿರಗಂದೂರ್ ಬಂಡವಾಳ ಹೂಡಿದ್ದು, ಎಸ್. ತಮನ್ ಸಂಗೀತ ಸಂಯೋಜಿಸಿದ್ದಾರೆ.ಇನ್ನು ಚಿತ್ರಕ್ಕೆ ವೆಂಕಟೇಶ್ ಅಂಗುರಾಜ್ ಅವರ ಛಾಯಾಗ್ರಹಣವಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 