ಕೊರೊನಾ ಭೀತಿ: ವಿದೇಶ ಪ್ರವಾಸ ರದ್ದುಪಡಿಸಿದ ಚಿತ್ರತಂಡ
ಬೆಂಗಳೂರು, ಮಾ.3, ಕೊರೊನಾ ಭೀತಿ ಸ್ಯಾಂಡಲ್ ವುಡ್ ಚಿತ್ರಕ್ಕೂ ತಟ್ಟಿದೆ.ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯಿಸುತ್ತಿರುವ ಯುವರತ್ನ ಚಿತ್ರದ ಚಿತ್ರೀಕರಣ ವಿದೇಶದಲ್ಲಿ ನಡೆಯಬೇಕಿತ್ತು.ಇದೇ ತಿಂಗಳು 3ರಿಂದ 7ರವರೆಗೆ ವಿದೇಶದಲ್ಲಿ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಮಾಡಿಕೊಂಡಿತ್ತು. ಅಲ್ಲದೇ, ಮುಂಗಡವಾಗಿ ಸ್ಲೋವೆನಿಯಾದಲ್ಲಿ ಹೋಟೆಲ್ ಕೂಡ ಬುಕ್ ಮಾಡಿಕೊಂಡಿತ್ತು. ಆದರೀಗ, ಕೊರೊನಾ ಭೀತಿಯಿಂದ ಚಿತ್ರತಂಡ ಚಿತ್ರೀಕರಣಕ್ಕೆ ತೆರಳಲು ಹಿಂದೇಟು ಹಾಕಿದೆ ಎನ್ನಲಾಗಿದೆ.ಸಂತೋಷ್ ಆನಂದ್ರಾಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಟಾಲಿವುಡ್ ಮೂಲಕ ಬಣ್ಣದಲೋಕ ಪ್ರವೇಶಿಸಿದ್ದ ಸಯೇಷಾ ಸೈಗಲ್ ಪುನೀತ್ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ.ಚಿತ್ರಕ್ಕೆ ವಿಜಯ್ ಕಿರಗಂದೂರ್ ಬಂಡವಾಳ ಹೂಡಿದ್ದು, ಎಸ್. ತಮನ್ ಸಂಗೀತ ಸಂಯೋಜಿಸಿದ್ದಾರೆ.ಇನ್ನು ಚಿತ್ರಕ್ಕೆ ವೆಂಕಟೇಶ್ ಅಂಗುರಾಜ್ ಅವರ ಛಾಯಾಗ್ರಹಣವಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 