ಕೊರೋನಾ ಭೀತಿ: ವಸಂತ ಪಂಚಮಿ ಉತ್ಸವ ರದ್ದು
ಶಾಂತಿನಿಕೇತನ, ಮಾ 07, ಚೀನಾದಲ್ಲಿ ಪತ್ತೆಯಾಗಿ, ಪ್ರಸ್ತುತ ವಿಶ್ವಚ ವಿವಿಧ ರಾಷ್ಟ್ರಗಳಲ್ಲಿ ಹರಡಿರುವ ಕೊರೋನಾ ವೈರಸ್ ತೀವ್ರ ಆತಂಕ ಸೃಷ್ಟಿಸಿದೆ. ಭಾರತದಲ್ಲಿಯೂ ಕೊರೋನಾ ಭೀತಿ ಎದುರಾಗಿರುವ ಕಾರಣ ಕೇಂದ್ರ ಹಾಗೂ ರಾಜ್ಯಸರ್ಕಾರಗಳು ವೈರಾಣು ನಿಗ್ರಹಕ್ಕೆ ವ್ಯಾಪಕ ಕಟ್ಟೆಚ್ಚರ ಕೈಗೊಂಡಿದ್ದು, ಅತಿಹೆಚ್ಚು ಜನರು ಒಂದೆಡೆ ಸೇರದಂತೆ ಸೂಚಿಸಿದೆ. ಈ ನಿಟ್ಟಿನಲ್ಲಿ, ಶಾಂತಿನಿಕೇತನದ ವಿಶ್ವ ಭಾರತಿ ವಿಶ್ವವಿದ್ಯಾಲಯದ ಅಧಿಕಾರಿಗಳು, ಈ ವರ್ಷ ವಸಂತ ಪಂಚಮಿ ಉತ್ಸವ ನಡೆಸದಿರಲು ನಿರ್ಧರಿಸಿದ್ದಾರೆ. ಹೋಳಿ ಹಬ್ಬದ ಸಂಕೇತವಾಗಿ ವಿಶ್ವ ವಿದ್ಯಾಲಯದ ಆವರಣದಲ್ಲಿ ಪ್ರತಿ ವರ್ಷ ನಡೆಸಲಾಗುವ ವಸಂತ ಪಂಚಮಿ ಉತ್ಸವದಲ್ಲಿ ಸಾವಿರಾರು ಜನರು ಭಾಗವಹಿಸುತ್ತಾರೆ. ಈ ಸಂದರ್ಭದಲ್ಲಿ ವೈರಾಣು ಒಬ್ಬರಿಂದೊಬ್ಬರಿಗೆ ಹಡುವ ಸಾಧ್ಯತೆ ಹೆಚ್ಚಿರುವ ಕಾರಣ, ಉತ್ಸವ ರದ್ದುಪಡಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 