ಕೊರೋನಾ ಭೀತಿ: ವಸಂತ ಪಂಚಮಿ ಉತ್ಸವ ರದ್ದು
ಶಾಂತಿನಿಕೇತನ, ಮಾ 07, ಚೀನಾದಲ್ಲಿ ಪತ್ತೆಯಾಗಿ, ಪ್ರಸ್ತುತ ವಿಶ್ವಚ ವಿವಿಧ ರಾಷ್ಟ್ರಗಳಲ್ಲಿ ಹರಡಿರುವ ಕೊರೋನಾ ವೈರಸ್ ತೀವ್ರ ಆತಂಕ ಸೃಷ್ಟಿಸಿದೆ. ಭಾರತದಲ್ಲಿಯೂ ಕೊರೋನಾ ಭೀತಿ ಎದುರಾಗಿರುವ ಕಾರಣ ಕೇಂದ್ರ ಹಾಗೂ ರಾಜ್ಯಸರ್ಕಾರಗಳು ವೈರಾಣು ನಿಗ್ರಹಕ್ಕೆ ವ್ಯಾಪಕ ಕಟ್ಟೆಚ್ಚರ ಕೈಗೊಂಡಿದ್ದು, ಅತಿಹೆಚ್ಚು ಜನರು ಒಂದೆಡೆ ಸೇರದಂತೆ ಸೂಚಿಸಿದೆ. ಈ ನಿಟ್ಟಿನಲ್ಲಿ, ಶಾಂತಿನಿಕೇತನದ ವಿಶ್ವ ಭಾರತಿ ವಿಶ್ವವಿದ್ಯಾಲಯದ ಅಧಿಕಾರಿಗಳು, ಈ ವರ್ಷ ವಸಂತ ಪಂಚಮಿ ಉತ್ಸವ ನಡೆಸದಿರಲು ನಿರ್ಧರಿಸಿದ್ದಾರೆ. ಹೋಳಿ ಹಬ್ಬದ ಸಂಕೇತವಾಗಿ ವಿಶ್ವ ವಿದ್ಯಾಲಯದ ಆವರಣದಲ್ಲಿ ಪ್ರತಿ ವರ್ಷ ನಡೆಸಲಾಗುವ ವಸಂತ ಪಂಚಮಿ ಉತ್ಸವದಲ್ಲಿ ಸಾವಿರಾರು ಜನರು ಭಾಗವಹಿಸುತ್ತಾರೆ. ಈ ಸಂದರ್ಭದಲ್ಲಿ ವೈರಾಣು ಒಬ್ಬರಿಂದೊಬ್ಬರಿಗೆ ಹಡುವ ಸಾಧ್ಯತೆ ಹೆಚ್ಚಿರುವ ಕಾರಣ, ಉತ್ಸವ ರದ್ದುಪಡಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 