ಸಿಬಿಸಿ ಕಾಲುವೆ ನೀರನ್ನು ಜಿಎಲ್ಬಿಸಿ ಕಾಲುವೆ ಮೂಲಕ ಕಾಡಾಪೂರ ಕೆರೆ ತುಂಬಿಸಿ: ಅರ್ಜುನ ಗುರುನಾಥ
CBC canal water should be pumped into Kadapur lake through GLBC canal: Arjuna Gurunath
ಚಿಕ್ಕೋಡಿ, 06 : ತಾಲೂಕಿನಲ್ಲಿ ಹಾದು ಹೋಗಿರುವ ಸಿಬಿಸಿ ಕಾಲುವೆ ನೀರನ್ನು ಜಿಎಲ್ಬಿಸಿ ಕಾಲುವೆಗೆ ಜೋಡಿಸಿ ಕಾಡಾಪೂರ ಕೆರೆ ತುಂಬಿಸಬೇಕು ಎಂದು ಪ್ರಗತಿಪರ ಯುವ ರೈತ ಅರ್ಜುನ ಗುರುನಾಥ ಒತ್ತಾಯಿಸಿದರು.
ಪತ್ರಿಕಾ ಪ್ರಕಟಣೆ ಮೂಲಕ ಸರ್ಕಾರವನ್ನು ಒತ್ತಾಯಿಸಿದ ಅವರು, ಪ್ರಸಕ್ತ ವರ್ಷದಲ್ಲಿ ಬಿಸಿಲಿನ ದಗೆ ಹೆಚ್ಚುತ್ತಿದೆ. ಮಾರ್ಚ, ಎಪ್ರೀಲ್ ಮತ್ತು ಮೇ ತಿಂಗಳ ಎರಡನೆ ವಾರ ಆರಂಭವಾದರೂ ಒಂದೂ ಅಡ್ಡ ಮಳೆ ಸುರಿಯುತ್ತಿಲ್ಲ, ಇದರಿಂದ ರೈತಾಪಿ ವರ್ಗ ಸಂಕಷ್ಟ ಎದುರಿಸುತ್ತಿದ್ದಾನೆ. ಸರ್ಕಾರ ಕೂಡಲೇ ಸಿಬಿಸಿ ಕಾಲುವೆ ನೀರನ್ನು ಜಿಎಲ್ಬಿಸಿ ಕಾಲುವೆಗೆ ಸೇರಿಸಿ ಕಾಡಾಪೂರ ಕೆರೆ ತುಂಬಿಸಬೇಕು ಎಂದು ಮನವಿ ಮಾಡಿದರು.
ಕಳೆದ ವರ್ಷದ ಬೇಸಿಗೆಯಲ್ಲಿ ಕೆರೆ ನೀರು ಖಾಲಿಯಾದಾಗ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಕಾಡಾಪೂರ ಕೆರೆ ತುಂಬಿಸಿ ರೈತರಿಗೆ ಅನುಕೂಲ ಕಲ್ಪಿಸಿದ್ದರು. ಈ ವರ್ಷ ಕೆರೆ ಖಾಲಿಯಾಗುತ್ತಾ ಬಂದಿದೆ. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಸಂಸದೆ ಪ್ರಿಯಂಕಾ ಜಾರಕಿಹೊಳಿ ದೊಡ್ಡ ಮನಸ್ಸು ಮಾಡಿ ಕಾಡಾಪೂರ ಕೆರೆ ತುಂಬಿಸಬೇಕು. ಇದರಿಂದ ಕೇರೂರ, ಕಾಡಾಪೂರ ಸೇರಿದಂತೆ ಮುಂತಾದ ಹಳ್ಳಿಯ ಜನರಿಗೆ ಅನುಕೂಲವಾಗಿದೆ ಎಂದರು.
ಹಿಡಕಲ್ ಜಲಾಶಯದಿಂದ ಚಿಕ್ಕೋಡಿ ಸಿಬಿಸಿ ಕಾಲುವೆಗೆ ನೀರು ಸರಾಗವಾಗಿ ಬರುತ್ತದೆ. ಜಿಎಲ್ಬಿಸಿ ಕಾಲುವೆ ನೀರು ರಾಯಬಾಗ ತಾಲೂಕು ಸುತ್ತುವರೆದು ಬರುತ್ತದೆ. ಹೀಗಾಗಿ ಸಿಬಿಸಿ ಕಾಲುವೆ ನೀರನ್ನು ಜಿಎಲ್ಬಿಸಿ ಕಾಲುವೆಗೆ ಜೋಡಿಸಿದರೆ ಕಾಡಾಪೂರ ಕೆರೆ ತುಂಬಿಸಲು ಅನುಕೂಲವಾಗುತ್ತದೆ. ನೀರಾವರಿ ಇಲಾಖೆ ಅಧಿಕಾರಿಗಳು ಸೂಕ್ತ ಗಮನ ಹರಿಸಿ ರೈತರ ಜಾನುವಾರಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಅರ್ಜುನ ಗುರುನಾಥ ಒತ್ತಾಯಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 