ಸುಪ್ರೀಂ ಮೊರೆ ಹೋದ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ
ನವದೆಹಲಿ 30: ವರ್ಗಾವಣೆ ಪ್ರಶ್ನಿಸಿ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಆದರೆ ನ್ಯಾಯಾಲಯ ಪ್ರಕರಣದ ತುರ್ತು ವಿಚಾರಣೆಗೆ ನಿರಾಕರಿಸಿದೆ.
ಎ ಕೆ ಬಸ್ಸಿ ರಾಕೇಶ್ ಅಸ್ತಾನಾ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದ್ದರು.ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಎ ಕೆ ಬಸ್ಸಿ, ಲಂಚ ಪ್ರಕರಣದಲ್ಲಿ ರಾಕೇಶ್ ಅಸ್ತಾನಾ ವಿರುದ್ಧ ತಮ್ಮ ಬಳಿ ದೋಷಾರೋಪಣಾ ಸಾಕ್ಷಿಗಳಿದ್ದು ತಾಂತ್ರಿಕ ಕಣ್ಗಾವಲಿಗೆ ಸಾಕ್ಷಿಗಳನ್ನು ಕರೆಯಬೇಕೆಂದು ಸಹ ನ್ಯಾಯಾಲಯವನ್ನು ಕೋರಿರುವುದಾಗಿ ತಿಳಿಸಿದ್ದಾರೆ.
ಅಸ್ತಾನಾ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಸಂಬಂಧಪಟ್ಟಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಬೇಕೆಂದು ಅವರು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.
ಎ ಕೆ ಬಸ್ಸಿ ಅವರನ್ನು ಸಾರ್ವಜನಿಕ ಹಿತಾಸಕ್ತಿ ಕಾರಣ ನೀಡಿ ಪೋರ್ಟ್ ಬ್ಲೇರ್ ಅಂಡಮಾನ್ ಜೈಲ್ ಗೆ ವರ್ಗಾಯಿಸಲಾಗಿತ್ತು. ಈ ಹಿಂದೆ ಕೇಂದ್ರ ಜಾಗೃತ ಆಯೋಗಕ್ಕೆ ದೂರು ನೀಡಿದ್ದ ಅಸ್ತಾನಾ, ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ನಿರ್ದೇಶನದ ಮೇರೆಗೆ ಬಸ್ಸಿ ನನ್ನ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಬಸ್ಸಿ ಹಾಗೂ ಜಂಟಿ ನಿರ್ದೇಶಕ ಎ ಕೆ ಶರ್ಮ ಅವರನ್ನು ನನ್ನ ವಿರುದ್ಧ ಮಾಹಿತಿ ಸಂಗ್ರಹಿಸಲು ಗುಜರಾತ್ ಗೆ ಕಳುಹಿಸಲಾಗಿತ್ತು ಎಂದು ಆರೋಪಿಸಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 