ಸುಪ್ರೀಂ ಮೊರೆ ಹೋದ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ
ನವದೆಹಲಿ 30: ವರ್ಗಾವಣೆ ಪ್ರಶ್ನಿಸಿ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಆದರೆ ನ್ಯಾಯಾಲಯ ಪ್ರಕರಣದ ತುರ್ತು ವಿಚಾರಣೆಗೆ ನಿರಾಕರಿಸಿದೆ.
ಎ ಕೆ ಬಸ್ಸಿ ರಾಕೇಶ್ ಅಸ್ತಾನಾ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದ್ದರು.ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಎ ಕೆ ಬಸ್ಸಿ, ಲಂಚ ಪ್ರಕರಣದಲ್ಲಿ ರಾಕೇಶ್ ಅಸ್ತಾನಾ ವಿರುದ್ಧ ತಮ್ಮ ಬಳಿ ದೋಷಾರೋಪಣಾ ಸಾಕ್ಷಿಗಳಿದ್ದು ತಾಂತ್ರಿಕ ಕಣ್ಗಾವಲಿಗೆ ಸಾಕ್ಷಿಗಳನ್ನು ಕರೆಯಬೇಕೆಂದು ಸಹ ನ್ಯಾಯಾಲಯವನ್ನು ಕೋರಿರುವುದಾಗಿ ತಿಳಿಸಿದ್ದಾರೆ.
ಅಸ್ತಾನಾ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಸಂಬಂಧಪಟ್ಟಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಬೇಕೆಂದು ಅವರು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.
ಎ ಕೆ ಬಸ್ಸಿ ಅವರನ್ನು ಸಾರ್ವಜನಿಕ ಹಿತಾಸಕ್ತಿ ಕಾರಣ ನೀಡಿ ಪೋರ್ಟ್ ಬ್ಲೇರ್ ಅಂಡಮಾನ್ ಜೈಲ್ ಗೆ ವರ್ಗಾಯಿಸಲಾಗಿತ್ತು. ಈ ಹಿಂದೆ ಕೇಂದ್ರ ಜಾಗೃತ ಆಯೋಗಕ್ಕೆ ದೂರು ನೀಡಿದ್ದ ಅಸ್ತಾನಾ, ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ನಿರ್ದೇಶನದ ಮೇರೆಗೆ ಬಸ್ಸಿ ನನ್ನ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಬಸ್ಸಿ ಹಾಗೂ ಜಂಟಿ ನಿರ್ದೇಶಕ ಎ ಕೆ ಶರ್ಮ ಅವರನ್ನು ನನ್ನ ವಿರುದ್ಧ ಮಾಹಿತಿ ಸಂಗ್ರಹಿಸಲು ಗುಜರಾತ್ ಗೆ ಕಳುಹಿಸಲಾಗಿತ್ತು ಎಂದು ಆರೋಪಿಸಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 