ಉಗಾರ ಪುರಸಭೆ ವ್ಯಾಪ್ತಿಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
CC road work launched in Ugara Municipality
ಉಗಾರ ಪುರಸಭೆ ವ್ಯಾಪ್ತಿಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
ಕಾಗವಾಡ 14: ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಅನುದಾನ ದೊರೆಯುತ್ತಿದ್ದು, ಉಗಾರ ಪಟ್ಟಣದ ಪುರಸಭೆ ಸದಸ್ಯರು ಪಕ್ಷಭೇದ ಮರೆತು, ಪಟ್ಟಣದ ಅಭಿವೃದ್ಧಿಗೆ ಕೈಜೋಡಿಸಿ, ಮಾದರಿ ಪಟ್ಟಣವನ್ನಾಗಿಸಲು ಶ್ರಮಿಸಬೇಕೆಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.
ಅವರು, ರವಿವಾರ ದಿ. 14 ರಂದು ತಾಲೂಕಿನ ಉಗಾರ ಖುರ್ದ ಪುರಸಭೆ ವ್ಯಾಪ್ತಿಯಲ್ಲಿ ರೂ.3.75 ಕೋಟಿ ವಿವಿಧ ಅನುದಾನದಗಳಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ವಿವಿಧ ಕಾಮಗಾರಿಗೆ ಚಾಲನೆ ನೀಡಿ, ಮಾತನಾಡುತ್ತಿದ್ದರು. ವಿರೋದ ಪಕ್ಷದವರು ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡ ನಂತರ ಅಭಿವೃದ್ಧಿಗೆ ಅನುದಾನ ಬರುತ್ತಿಲ್ಲವೆಂದು ಹೇಳುತ್ತಿರುವ ವಿರೋಧಿಗಳಿಗೆ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳೇ ಉತ್ತರವಾಗಿವೆ ಎಂದರು.
ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಪುರಸಭೆ ಸದಸ್ಯರು, ಅಧಿಕಾರಿಗಳು ಎಲ್ಲರೂ ಕೂಡಿಕೊಂಡು, ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಗುಣಮಟ್ಟದ ಕಾಮಗಾರಿಗಳು ಆಗುವಂತೆ ನಿಗಾ ವಹಿಸಿಬೇಕು ಎಂದರು.
ಕೃಷ್ಣಾ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಶಂಕರ ವಾಘಮೋಡೆ, ಪುರಸಭೆ ಅಧ್ಯಕ್ಷೆ ಫಾತಿಮಾ ನದಾಫ, ಹಿರಿಯ ಅಭಿಯಂತರ ಡಿ.ಬಿ. ಪಠಾಣ, ಗುತ್ತಿಗೆದಾರ ಸಂದೀಪ ಖರಾಡೆ, ಅಜೀತ ಭೋಸಲೆ, ವಿಕಾಸ ಪಾಂಡರೆ, ಮುಖಂಡರಾದ ಸುರೇಶ ವಾಘಮೋಡೆ, ವೀರಭದ್ರ ಕಟಗೇರಿ, ಅಶೋಕ ಕಾಂಬಳೆ, ಆರತಿ ಜಗತಾಪ, ವಿಜಯ ಅಸೋದೆ, ಶೇಖರ ಖರಾಡೆ, ಪ್ರಕಾಶ ಥೋರೂಸೆ, ಬಾಳು ಕಟಗೇರಿ, ರಾಜೇಶ ದಾನೋಳೆ, ಮದನ ದೇಶಿಂಗೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 