ಬೆಂಗಳೂರಿನ ವಿವಿಧೆಡೆ ಸಿಸಿಬಿ ದಾಳಿ; ಮದ್ಯ, ತಂಬಾಕು ಉತ್ಪನ್ನ ವಶ
ಬೆಂಗಳೂರು,
ಏ.18, ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಜಾರಿಯಲ್ಲಿದ್ದರೂ ಅಕ್ರಮವಾಗಿ
ಮದ್ಯ, ಸಿಗರೇಟ್, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ
ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ರಾಮಮೂರ್ತಿ ನಗರದಲ್ಲಿ ದಾಳಿ ನಡೆಸಿ, 1
ಸಾವಿರ ಟೆಟ್ರಾ ಪ್ಯಾಕ್ ವಿಸ್ಕಿ ಹಾಗೂ ಕೆಂಗೇರಿಯಲ್ಲಿ ತಂಬಾಕು ಉತ್ಪನ್ನಗಳನ್ನು
ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆಅಲ್ಲದೆ, ಆರ್ಎಂಸಿ
ಯಾರ್ಡ್ನಲ್ಲಿ ಪಿಎಂಎಚ್ ಟ್ರೇಡರ್ಸ್ ಮಳಿಗೆ ಮೇಲೆ ದಾಳಿ ನಡೆಸಿದ ಸಿಸಿಬಿ
ಅಧಿಕಾರಿಗಳು, 1.96 ಲಕ್ಷ ರೂ ಮೌಲ್ಯದ 560 ಬಂಡಲ್ ನ 11 ಸಾವಿರದ 200 ಪ್ಯಾಕ್ಸ್
ಬೀಡಿಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರ್ ಎಂ ಸಿ ಯಾರ್ಡ್
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು, ಕೊಡಿಗೇಹಳ್ಳಿಯ ಲಿಕ್ಕರ್ ಶಾಪ್ ಮೇಲೂ
ಸಿಸಿಬಿ ಪೊಲೀಸರು ದಾಳಿ ನಡೆಸಿ, 17 ಲೀಟರ್ ನ 96 ಪೌಚಸ್ ಗಳ 180 ಎಂಎಲ್ ಲಿಕ್ಕರ್
ಜಪ್ತಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 