ಕೊರೋನಾ ವೈರಸ್ ವಿಷಯದಲ್ಲಿ ಕೇಂದ್ರ ಸಂವೇದನಾ ಶೂನ್ಯ: ರಾಹುಲ್
ನವದೆಹಲಿ, ಮಾ 13, ಕೊರೋನಾ ವೈರಸ್ ಸೊಂಕು ಅತಿದೊಡ್ಡ ಸಮಸ್ಯೆ ಎಂದು ಬಣ್ಣಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ವೈರಾಣು ನಿಯಂತ್ರಣದ ವಿಷಯದಲ್ಲಿ ಕೇಂದ್ರ ಸರ್ಕಾರ ಸಂವೇದನಾಶೂನ್ಯವಾಗಿದೆ ಎಂದು ಟೀಕಿಸಿದ್ದಾರೆ. “ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ. ಕೊರೋನಾ ವೈರಸ್ ಅತ್ಯಂತ ಗಂಭೀರ ಸಮಸ್ಯೆ. ಇದನ್ನು ಕಡೆಗಣಿಸುವುದರಿಂದ ಯಾವುದೇ ಪರಿಹಾರ ಸಿಗುವುದಿಲ್ಲ” ಎಂದು ಅವರು ಫೆಬ್ರವರಿ 12ರ ಟ್ಟೀಟನ್ನು ಮರು ಟ್ವೀಟ್ ಮಾಡಿ ತಿಳಿಸಿದ್ದಾರೆ. “ಕೇಂದ್ರ ಸರ್ಕಾರವು ಸಂವೇದನಾರಹಿತವಾಗಿದ್ದು, ಕರೋನಾ ವೈರಸ್ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ ದೇಶದ ಆರ್ಥಿಕತೆ ನಾಶವಾದೀತು” ಎಂದು ಎಚ್ಚರಿಸಿದ್ದಾರೆ. ಗುರುವಾರ ಸುದ್ದಿಗಾರರೊಡನೆ ಮಾತನಾಡಿದ್ದ ರಾಹುಲ್ ಗಾಂಧಿ, “ಕೊರೋನಾ ವೈರಸ್ ನಿಯಂತ್ರಣಕ್ಕೆ ಸರ್ಕಾರ ಯಾವುದೇ ಸಿದ್ಧತೆ ಮಾಡಿಕೊಂಡಿಲ್ಲ. ವೈರಾಣು ದೇಶಾದ್ಯಂತ ಹರಡುತ್ತಿದೆ. ಆದರೆ ನಮ್ಮ ಪ್ರಧಾನಿಯವರು ಚಕ್ರದ ಮೇಲೆ ಮಲಗಿ ನಿದ್ರಿಸುತ್ತಿದ್ದಾರೆ. ದುರದೃಷ್ಟವಶಾತ್ ನಮ್ಮ ಮಾತನ್ನು ಅವರು ಆಲಿಸುತ್ತಿಲ್ಲ” ಎಂದು ದೂರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 