ನರೇಗಾ ಯೋಜನೆ ಮಾಹಿತಿ ಜಾಗೃತಿ ರಥಕ್ಕೆ ಸಿಇಒ ಚಾಲನೆ

ಹಾವೇರಿ 15: ಗ್ರಾಮೀಣ ಭಾಗದ ಪ್ರತಿ ಮನೆ ಮನೆಗೆ ಭೇಟಿ ನೀಡಿ, ನರೇಗಾ ಯೋಜನೆಯ ಮಾಹಿತಿ ತಲುಪಿಸುವ ಜಾಗೃತಿ ರಥಕ್ಕೆ ಸೋಮವಾರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ್ ಅವರು ಚಾಲನೆ ನೀಡಿದರು ಹಾಗೂ  ಕರಪತ್ರ ಬಿಡುಗಡೆಗೊಳಿಸಿದರು. 

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತರಿ ಯೋಜನೆಯಡಿ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಲು ದಿನಾಂಕ 02-10-2024 ರಿಂದ ಒಂದು ತಿಂಗಳ ಕಾಲ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ “ಉದ್ಯೋಗಖಾತರಿ ನಡಿಗೆ ಸಬಲತೆಯೆಡೆಗೆ” ಅಭಿಯಾನ ಆರಂಭಿಸಲಾಗಿದೆ. ರೈತರು ತಮಗೆ ಬೇಕಾದ ಕಾಮಗಾರಿಗಳನ್ನು ಅನುಷ್ಠಾನ ಮಾಡಿಕೊಳ್ಳಲು ಮೊಬೈಲ್ ಮತ್ತು ಇಲಾಖೆಯ ವೆಬ್‌ಸೈಟಿನಲ್ಲಿ ಇಂದೀಕರಿಸಲು ಅನುವು ಮಾಡಲಾಗಿದೆ. ಈ ಒಂದು ಸೌಲಭ್ಯದಿಂದ ಗ್ರಾಮೀಣ ಭಾಗದಜನರಿಗೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿ.ಪಂ.ಅಧಿಕಾರಿಗಳಾದ ಕುಮಾರ ಮಣ್ಣವಡ್ಡರ, ಮೀಶೆ, ಕೊರವರ, ಜಿಲ್ಲಾ ಬ್ಯಾಂಕ್ ವ್ಯವಸ್ಥಾಪಕ ಅಣ್ಣಯ್ಯ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ ಇತರರು ಉಪಸ್ಥಿತರಿದ್ದರು.