ಮದ್ಯ ಮಾರಾಟಗಾರರಿಂದ ಮುಖ್ಯಮಂತ್ರಿ ಭೇಟಿ: ಹಲವು ರಿಯಾಯಿತಿಗಾಗಿ ಮನವಿ
ಬೆಂಗಳೂರು, ಮೇ 13,ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾವ್ ರಾಜ್ ಹೆಗ್ಡೆ ಅವರ ನೇತೃತ್ವದಲ್ಲಿ ಮದ್ಯ ಮಾರಾಟಗಾರರ ನಿಯೋಗವೊಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿಂದು ಭೇಟಿಯಾಗಿ ಮಾತುಕತೆ ನಡೆಸಿತು.ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಗ್ಡೆ, ಲಾಕ್ ಡೌನ್ನಿಂದಾಗಿ ಈಗಾಗಲೇ ನಮಗೆ 800ರಿಂದ ಒಂದು ಸಾವಿರ ಕೋಟಿ ನಷ್ಟವಾಗಿದೆ.
ಸಂಗ್ರಹವಿರುವ ಮದ್ಯ ಮಾರಾಟ ಮಾಡಲು ಸರ್ಕಾರ ಅವಕಾಶ ನೀಡಿದೆ. ಅದೇ ರೀತಿ ಮದ್ಯ ಖರೀದಿಗೂ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದೇವೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮದ್ಯ ಮಾರಾಟ ಮಾಡಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.ಜೊತೆಗೆ ಕನಿಷ್ಠ ಒಂದು ತಿಂಗಳ ಸನ್ನದು ಶುಲ್ಕವನ್ನು ಮುಂದಿನ ವರ್ಷದ ಸನ್ನದು ಶುಲ್ಕದೊಂದಿಗೆ ಹೊಂದಾಣಿಕೆ ಮಾಡಿಕೊಡಲು ಕೇಳಿದ್ದೇವೆ. 2020-21 ಸಾಲಿನ ಸನ್ನದು ಶುಲ್ಕವನ್ನು ನಾಲ್ಕು ಕಂತುಗಳನ್ನು ಕಟ್ಟಲು ಅವಕಾಶ ನೀಡುವಂತೆ ಕೇಳಿದ್ದೇವೆ. ವಿದ್ಯುತ್ ಬಿಲ್ ಪಾವತಿ / ರಿಯಾಯತಿ ಬಗ್ಗೆ ಕೆಪಿಟಿಸಿಎಲ್ಗೆ ನಿರ್ದೇಶನ ನೀಡಲು ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.ಬ್ಯಾಂಕ್ ಸಾಲದ ಕಂತು ಮತ್ತು ಬಡ್ಡಿ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ಮನವಿ ಮಾಡಿಕೊಂಡಿದ್ದೇವೆ. ಆಸ್ತಿ ತೆರಿಗೆ ಕಟ್ಟಡ ತೆರಿಗೆಗಳಲ್ಲಿ ರಿಯಾಯಿತಿ ನೀಡಬೇಕು ಎಂದೂ ಒತ್ತಾಯಿಸಿದ್ದೇವೆ ಎಂದು ಅವರು ಹೇಳಿದರು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 