ಮದ್ಯ ಮಾರಾಟಗಾರರಿಂದ ಮುಖ್ಯಮಂತ್ರಿ ಭೇಟಿ: ಹಲವು ರಿಯಾಯಿತಿಗಾಗಿ ಮನವಿ
ಬೆಂಗಳೂರು, ಮೇ 13,ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾವ್ ರಾಜ್ ಹೆಗ್ಡೆ ಅವರ ನೇತೃತ್ವದಲ್ಲಿ ಮದ್ಯ ಮಾರಾಟಗಾರರ ನಿಯೋಗವೊಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿಂದು ಭೇಟಿಯಾಗಿ ಮಾತುಕತೆ ನಡೆಸಿತು.ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಗ್ಡೆ, ಲಾಕ್ ಡೌನ್ನಿಂದಾಗಿ ಈಗಾಗಲೇ ನಮಗೆ 800ರಿಂದ ಒಂದು ಸಾವಿರ ಕೋಟಿ ನಷ್ಟವಾಗಿದೆ.
ಸಂಗ್ರಹವಿರುವ ಮದ್ಯ ಮಾರಾಟ ಮಾಡಲು ಸರ್ಕಾರ ಅವಕಾಶ ನೀಡಿದೆ. ಅದೇ ರೀತಿ ಮದ್ಯ ಖರೀದಿಗೂ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದೇವೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮದ್ಯ ಮಾರಾಟ ಮಾಡಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.ಜೊತೆಗೆ ಕನಿಷ್ಠ ಒಂದು ತಿಂಗಳ ಸನ್ನದು ಶುಲ್ಕವನ್ನು ಮುಂದಿನ ವರ್ಷದ ಸನ್ನದು ಶುಲ್ಕದೊಂದಿಗೆ ಹೊಂದಾಣಿಕೆ ಮಾಡಿಕೊಡಲು ಕೇಳಿದ್ದೇವೆ. 2020-21 ಸಾಲಿನ ಸನ್ನದು ಶುಲ್ಕವನ್ನು ನಾಲ್ಕು ಕಂತುಗಳನ್ನು ಕಟ್ಟಲು ಅವಕಾಶ ನೀಡುವಂತೆ ಕೇಳಿದ್ದೇವೆ. ವಿದ್ಯುತ್ ಬಿಲ್ ಪಾವತಿ / ರಿಯಾಯತಿ ಬಗ್ಗೆ ಕೆಪಿಟಿಸಿಎಲ್ಗೆ ನಿರ್ದೇಶನ ನೀಡಲು ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.ಬ್ಯಾಂಕ್ ಸಾಲದ ಕಂತು ಮತ್ತು ಬಡ್ಡಿ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ಮನವಿ ಮಾಡಿಕೊಂಡಿದ್ದೇವೆ. ಆಸ್ತಿ ತೆರಿಗೆ ಕಟ್ಟಡ ತೆರಿಗೆಗಳಲ್ಲಿ ರಿಯಾಯಿತಿ ನೀಡಬೇಕು ಎಂದೂ ಒತ್ತಾಯಿಸಿದ್ದೇವೆ ಎಂದು ಅವರು ಹೇಳಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 