ವಿಕ್ಟೋರಿಯಾ, ವಾಣಿವಿಲಾಸ್ ಸಾರ್ವಜನಿಕ ಆಸ್ಪತ್ರೆಗಳಿಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ: ಪರಿಶೀಲನೆ
CM Siddaramaiah's surprise visit to Victoria and Vanivilas public hospitals: Inspection
ಬೆಂಗಳೂರು 06: ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ನಗರದ ವಿಕ್ಟೋರಿಯಾ ಮತ್ತು ವಾಣಿವಿಲಾಸ್ ಸಾರ್ವಜನಿಕ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ವೈದ್ಯಕೀಯ ಶಿಕ್ಷಣ ಸಚಿವ ಶರಣುಪ್ರಕಾಶ್ ಪಾಟೀಲ್ ಅವರೊಂದಿಗೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಆಸ್ಪತ್ರೆಯ ಒಳರೋಗಿಗಳು, ಹೊರರೋಗಿಗಳು ಮತ್ತು ಅವರ ಸಹಾಯಕರೊಂದಿಗೆ ಮಾತಾಡಿದರು. ಇದೇ ವೇಳೆ ರೋಗಿಗಳ ಜೊತೆ ವೈದ್ಯರು ಸಹಾನುಭೂತಿಯಿಂದ ವರ್ತಿಸಬೇಕು ಎಂದು ಸೂಚನೆ ನೀಡಿದರು.
ನಂತರ ಮಾಧ್ಯಮಗಳೊಂದಿಗೆ ಮಾತಾಡಿದ ಸಿಎಂ, ತಮ್ಮೊಂದಿಗೆ ಮಾತಾಡಿದ ರೋಗಿಗಳು ಮತ್ತು ಅವರ ಸಹಾಯಕರು ಆಸ್ಪತ್ರೆಗಳಲ್ಲಿ ಸಿಗುತ್ತಿರುವ ಸೇವೆ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ವೈದ್ಯರು ಹಾಗೂ ಬೇರೆ ಸಿಬ್ಬಂದಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಯಾರೂ ವೈದ್ಯರ ಬಗ್ಗೆ ಆರೋಪ ಮಾಡಿಲ್ಲ. ವೈದ್ಯರು ನಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಊಟ ಚೆನ್ನಾಗಿ ಕೊಡುತ್ತಿದ್ದಾರೆ ಅಂತ ಹೇಳಿದರು ಎಂದರು.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಂಗಾಂಗ ಕಸಿ ಉಚಿತವಾಗಿ ಮಾಡಿಕೊಡಲಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಇದಕ್ಕೆ ಲಕ್ಷಾಂತರ ರೂ. ವೆಚ್ಚ ಆಗುತ್ತದೆ. ಹೀಗಾಗಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಳ ಮಾಡಲು ಬೇಡಿಕೆ ಇದೆ. ಈ ಬಗ್ಗೆ ಪ್ರಸ್ತಾವನೆ ಇದೆ. ಸರ್ಕಾರ ಅದನ್ನು ಪರಿಗಣಿಸುತ್ತದೆ ಎಂದು ಹೇಳಿದರು.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ರೋಗಿಗಳಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರಕುತ್ತಿದೆಯೇ? ಚಿಕಿತ್ಸೆ ಪಡೆಯುವಲ್ಲಿ ಏನಾದರೂ ಅಡೆತಡೆಗಳಿವೆಯೇ? ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳ ಸ್ಪಂದನೆ ಹೇಗಿದೆ? ಎಂಬುದನ್ನು ಸ್ವತಃ ರೋಗಿಗಳಿಂದಲೇ ಮಾಹಿತಿ ಪಡೆದೆ.
ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಲ್ಲಿ ಬಹುತೇಕರು ಬಡವರು. ಖಾಸಗಿ ಆಸ್ಪತ್ರೆಯ ವೆಚ್ಚ ಭರಿಸಲಾಗದ ಕಾರಣಕ್ಕಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಆರ್ಥಿಕ ಪರಿಸ್ಥಿತಿಯ ಕಾರಣಕ್ಕೆ ಯಾವೊಬ್ಬ ರೋಗಿಯು ಗುಣಮಟ್ಟದ ಚಿಕಿತ್ಸೆಯಿಂದ ವಂಚಿತನಾಗಬಾರದೆಂದು ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ವೈದ್ಯಕೀಯ ಸಿಬ್ಬಂದಿ ಹಾಗೂ ಸಲಕರಣೆಗಳನ್ನು ಒದಗಿಸಲಾಗಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳು ಕೂಡ ಖಾಸಗಿ ಆಸ್ಪತ್ರೆಗಳಂತೆ ಉತ್ತಮ ಸೇವೆ, ಉತ್ಕೃಷ್ಟ ಸೌಲಭ್ಯ ಒದಗಿಸಲೇಬೇಕು. ಈ ವಿಷಯದಲ್ಲಿ ಯಾವ ರಾಜಿಯೂ ಇಲ್ಲ ಎಂದು ಬರೆದುಕೊಂಡಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 