ಸಿಎಂ ಸಿದ್ದರಾಮಯ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ
CM Siddaramaiah government's decision is welcome
ತಾಂಬಾ 12: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು, ಹಿರಿಯ ನ್ಯಾಯವಾದಿ ಹೆಚ್. ಕಾಂತಾರಾಜು ನೇತೃತ್ವದ ಆಯೋಗದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡನೆ ಮಾಡಿ, ಅನುಷ್ಠಾನಕ್ಕೆ ನಿರ್ಧಾರ ಮಾಡಿರುವ ಕ್ರಮವನ್ನು ಜಿಲ್ಲಾ ಅಹಿಂದ ಮುಖಂಡರಾದ ಸತೀಶಕುಮಾರ ಅಡವಿ ಸ್ವಾಗತಿಸಿದ್ದಾರೆ.
ಬದ್ದತೆಗೆ ಇನ್ನೊಂದು ಹೆಸರೇ ಸಿದ್ದರಾಮಯ್ಯ ಕಳೆದ 2015ರಲ್ಲಿ ರಾಜ್ಯದ ಎಲ್ಲ ಜಾತಿ ಜನಾಂಗದವರ ಸಾಮಾಜಿಕ, ಶೈಕ್ಷಣಿಕ, ಓದ್ಯೋಗಿಕ, ಕೌಟುಂಬಿಕ, ರಾಜಕೀಯ ಹೀಗೆ ಸುಮಾರು 55 ಅಂಶಗಳನ್ನು ಒಳಗೊಂಡ ಪ್ರಶ್ನಾವಳಿಯನ್ನು ರಚಿಸಿ 1.35 ಲಕ್ಷ ಗಣತಿದಾರರು, 1.27 ಕೋಟಿ ಮನೆಗಳಿಗೆ ಭೇಟಿ ಮಾಡಿ ಸಮೀಕ್ಷೆ ಮಾಡಲಾಗಿದೆ. ಸುಮಾರು 162 ಕೋಟಿ ರೂ. ಖರ್ಚು ಮಾಡಿ ಅತ್ಯಂತ ವೈಜ್ಞಾನಿಕವಾಗಿ ಸಿದ್ದಪಡಿಸಿರುವ ವರದಿ ಸ್ವೀಕರಿಸಿ ಹತ್ತಾರು ವರ್ಷಗಳೇ ಕಳೆದಿವೆ. ಈಗ ಬರುವ ಸಚಿವ ಸಂಪುಟದಲ್ಲಿ ಅನುಷ್ಠಾನಕ್ಕೆ ತರಲೇಬೇಕು ಎಂದು ಆಗ್ರಹಿಸಿದ್ದಾರೆ. ಈ ಒಂದು ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ ಸೇರಿ ಸಂಪುಟದ ಎಲ್ಲ ಸಚಿವರಿಗೆ ರಾಜ್ಯದ ಶೋಷಿತ ಸಮುದಾಯಗಳು ಕೃತಜ್ಞತೆ ಸಲ್ಲಿಸಿವೆ ಎಂದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 