ಸಿಎಂ ಸಿದ್ದರಾಮಯ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ
CM Siddaramaiah government's decision is welcome
ತಾಂಬಾ 12: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು, ಹಿರಿಯ ನ್ಯಾಯವಾದಿ ಹೆಚ್. ಕಾಂತಾರಾಜು ನೇತೃತ್ವದ ಆಯೋಗದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡನೆ ಮಾಡಿ, ಅನುಷ್ಠಾನಕ್ಕೆ ನಿರ್ಧಾರ ಮಾಡಿರುವ ಕ್ರಮವನ್ನು ಜಿಲ್ಲಾ ಅಹಿಂದ ಮುಖಂಡರಾದ ಸತೀಶಕುಮಾರ ಅಡವಿ ಸ್ವಾಗತಿಸಿದ್ದಾರೆ.
ಬದ್ದತೆಗೆ ಇನ್ನೊಂದು ಹೆಸರೇ ಸಿದ್ದರಾಮಯ್ಯ ಕಳೆದ 2015ರಲ್ಲಿ ರಾಜ್ಯದ ಎಲ್ಲ ಜಾತಿ ಜನಾಂಗದವರ ಸಾಮಾಜಿಕ, ಶೈಕ್ಷಣಿಕ, ಓದ್ಯೋಗಿಕ, ಕೌಟುಂಬಿಕ, ರಾಜಕೀಯ ಹೀಗೆ ಸುಮಾರು 55 ಅಂಶಗಳನ್ನು ಒಳಗೊಂಡ ಪ್ರಶ್ನಾವಳಿಯನ್ನು ರಚಿಸಿ 1.35 ಲಕ್ಷ ಗಣತಿದಾರರು, 1.27 ಕೋಟಿ ಮನೆಗಳಿಗೆ ಭೇಟಿ ಮಾಡಿ ಸಮೀಕ್ಷೆ ಮಾಡಲಾಗಿದೆ. ಸುಮಾರು 162 ಕೋಟಿ ರೂ. ಖರ್ಚು ಮಾಡಿ ಅತ್ಯಂತ ವೈಜ್ಞಾನಿಕವಾಗಿ ಸಿದ್ದಪಡಿಸಿರುವ ವರದಿ ಸ್ವೀಕರಿಸಿ ಹತ್ತಾರು ವರ್ಷಗಳೇ ಕಳೆದಿವೆ. ಈಗ ಬರುವ ಸಚಿವ ಸಂಪುಟದಲ್ಲಿ ಅನುಷ್ಠಾನಕ್ಕೆ ತರಲೇಬೇಕು ಎಂದು ಆಗ್ರಹಿಸಿದ್ದಾರೆ. ಈ ಒಂದು ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ ಸೇರಿ ಸಂಪುಟದ ಎಲ್ಲ ಸಚಿವರಿಗೆ ರಾಜ್ಯದ ಶೋಷಿತ ಸಮುದಾಯಗಳು ಕೃತಜ್ಞತೆ ಸಲ್ಲಿಸಿವೆ ಎಂದಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 