ರೊಟೇಷನ್ ಆಧಾರದ ಮೇಲೆ ಸಿಎಂ ಹುದ್ದೆ ಬಿಟ್ಟುಕೊಡುವುದಿಲ್ಲ : ಬಿಜೆಪಿ ಸ್ಪಷ್ಟನೆ
ಮುಂಬೈ, ನ 5: ಮಹಾರಾಷ್ಟ್ರ ವಿಧಾನಸಭೆಯ ಅವಧಿ ಇದೇ 9 ಕ್ಕೆ ಮುಕ್ತಾಯವಾಗಲಿದ್ದು, ಅಷ್ಟರೊಳಗೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಸ್ಥಾಪನೆಯಾಗುವುದು ಡೋಲಾಯಮಾನವಾಗಿದೆ. ಬಿಜೆಪಿ ಮತ್ತು ಶಿವಸೇನಾ ಮೈತ್ರಿಕೂಟಕ್ಕೆ ಸರ್ಕಾರ ರಚನೆ ಮಾಡುವಷ್ಟು ಬಹುಮತ ಲಭಿಸಿದ್ದರೂ ಅಧಿಕಾರ ಹಂಚಿಕೆಗಾಗಿ ಹಗ್ಗಜಗ್ಗಾಟ ಮುಂದುವರಿದಿದೆ. ಒಂದು ರೀತಿ ನಾ ಕೊಡೆ, ನೀ ಬಿಡೆ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚುನಾವಣೆಗೂ ಮುನ್ನ ರಾಜ್ಯದಲ್ಲಿ ಸಮಾನ ಅಧಿಕಾರ ಹಂಚಿಕೆಗೆ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದು, ಅದನ್ನು ಈಗ ಪಾಲನೆ ಮಾಡಬೇಕು ಎಂದು ಶಿವಸೇನೆ ಬಿಗಿಪಟ್ಟು ಹಿಡಿದಿದೆ. ಇನ್ನೊಂದು ಮಹತ್ವದ ಬೆಳವಣಿಗೆಯಲ್ಲಿ ರೊಟೇಷನ್ ಆಧಾರದ ಮೇಲೆ ಶಿವಸೇನೆಗೆ ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟುಕೊಡದೇ ಇರಲು ಬಿಜೆಪಿ ಗಟ್ಟಿ ನಿರ್ಧಾರ ಮಾಡಿದೆ ಎಂದು ತಿಳಿದು ಬಂದಿದೆ. ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಹಾಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನಡುವೆ ನಡೆದ ಮಾತುಕತೆಯ ನಂತರ ಶಿವಸೇನೆಗೆ ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟುಕೊಡದೇ ಇರಲು ಬಿಜೆಪಿ ನಿರ್ಧಾರ ಮಾಡಿದೆ ಎಂದು ಗೊತ್ತಾಗಿದೆ. ಹೀಗಾಗಿ ಇಂದು ಅಥವಾ ನಾಳೆ ಹೊಸ ಸರ್ಕಾರ ರಚನೆಯಾಗಲಿದೆ ಎಂಬುದು ಸತ್ಯಕ್ಕೆ ದೂರವಾಗಲಿದೆ. ಶಿವಸೇನೆ ಎನ್ ಸಿ ಪಿ ಮತ್ತು ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚನೆ ಮಾಡುವುದಾದರೆ ಮಾಡಲಿ, ಇದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 