ಸ್ನೇಹಿತನ ಜೊತೆಗೆ ತೆರಳಿದ್ದ ಯುವಕ ಶವವಾಗಿ ಪತ್ತೆ
ಮೈಸೂರು,ಮಾ.7,ಸ್ನೇಹಿತನೊಂದಿಗೆ ತೆರಳಿದ್ದ ಯುವಕನೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಸೋನಹಳ್ಳಿ ಬಳಿ ನಡೆದಿದೆ. ತಗಡೂರು ಗ್ರಾಮದ ನಿವಾಸಿ ಮನೋಜ್ ಕುಮಾರ್, ರಾಮಚಂದ್ರರಾವ್ ನಾಲೆಯ ತೂಬಿನಲ್ಲಿ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾನೆ. ಮೃತ ಮನೋಜ್ ಕುಮಾರ್ ಗುರುವಾರ ಸ್ನೇಹಿತ ವಿಜಯ್ ಕುಮಾರ್ ಜೊತೆ ತೆರಳಿದ್ದ. ಬಳಿಕ ಗೆಳೆಯರೆಲ್ಲರೂ ಸೇರಿ ರಾಮಚಂದ್ರರಾವ್ ನಾಲೆ ಬಳಿ ಪಾರ್ಟಿ ಮಾಡಿದ್ದರು. ಆದರೆ, ಆ ಪಾರ್ಟಿಯಲ್ಲಿ ಇಬ್ಬರು ಅಪರಿಚಿತರು ಸೇರಿಕೊಂಡಿದ್ದರು ಎನ್ನಲಾಗಿದೆ.ಈ ವೇಳೆ ಅಪರಿಚಿತರು ಹಾಗೂ ಮನೋಜ್ ಕುಮಾರ್ ನಡುವೆ ಜಗಳವಾಗಿ ಮಾತಿಗೆ ಮಾತು ಬೆಳೆದಿದೆ. ಈ ಜಗಳ ಅತಿರೇಕಕ್ಕೆ ಹೋಗಿ ಇಬ್ಬರ ನಡುವೆ ಹೊಡೆದಾಟ ಕೂಡ ಆಗಿತ್ತು. ಅಪರಿಚಿತರು ವಿಜಯ್ಕುಮಾರ್ ಬೈಕ್ನ್ನು ನಾಲೆಗೆ ತಳ್ಳಿದ್ದರು. ಆಗ ವಿಜಯ್ ಕುಮಾರ್ ಅಲ್ಲಿಂದ ಪರಾರಿಯಾಗಿದ್ದನು.ನಂತರ ಸ್ವಲ್ಪ ಸಮಯದ ನಂತರ ಹಿಂದಿರುಗಿ ಆತ ನಾಲೆ ಬಳಿ ಬಂದಾಗ ಮನೋಜ್ ಕುಮಾರ್ ಕೂಡ ನಾಪತ್ತೆಯಾಗಿದ್ದನು. ತಕ್ಷಣ ವೇ ಈ ವಿಷಯವನ್ನು ವಿಜಯ್ ಕುಮಾರ್, ಮನೋಜ್ ಪೋಷಕರಿಗೆ ತಿಳಿಸಿದ್ದನು ಎನ್ನಲಾಗಿದೆ.ಶುಕ್ರವಾರ ಮನೋಜ್ ಕುಮಾರ್ ಮೃತದೇಹ ಪತ್ತೆಯಾಗಿದ್ದು, ಮನೋಜ್ ಕಿವಿ, ಮರ್ಮಾಂಗ, ಹುಬ್ಬುಗಳ ಮೇಲೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮನೋಜ್ ಪೋಷಕರು ಇದು ಕೊಲೆ ಎಂದು ಆರೋಪಿಸಿ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 