ಮೊಹರಂ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಸಿಪಿಐ ಆರ್.ಆರ್. ಪಾಟೀಲ ಕರೆ
CPI's R.R. Patil calls for peaceful celebration of Muharram
ಲೋಕದರ್ಶನ ವರದಿ
ಮಹಾಲಿಂಗಪುರ 18: ಇದೇ ಜೂನ್ 26 ರಂದು ನಡೆಯಲಿರುವ ಮೊಹರಂ ಹಬ್ಬವನ್ನು ಮಹಾಲಿಂಗಪುರ ನಗರದಲ್ಲಿ ಯಾವುದೇ ಜಾತಿ, ಧರ್ಮ ಹಾಗೂ ಭೇದಭಾವವಿಲ್ಲದೆ ಸಹೋದರತ್ವ, ಸೌಹಾರ್ದತೆ ಮತ್ತು ಶಾಂತಿಯುತ ವಾತಾವರಣದಲ್ಲಿ ಆಚರಿಸಬೇಕೆಂದು ಸಿಪಿಐ ಆರ್.ಆರ್. ಪಾಟೀಲ ಕರೆ ನೀಡಿದರು.
ನಗರ ಪೊಲೀಸ್ ಠಾಣೆಯಲ್ಲಿ ಮೊಹರಂ ಹಬ್ಬದ ಅಂಗವಾಗಿ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಮಹಾಲಿಂಗಪುರ ನಗರವು ಸದಾ ಸೌಹಾರ್ದತೆಗೆ ಹೆಸರಾಗಿದ್ದು, ಎಲ್ಲಾ ಸಮುದಾಯದ ಜನರು ಪರಸ್ಪರ ಸಹಕಾರದಿಂದ ಹಬ್ಬ-ಹರಿದಿನಗಳನ್ನು ಆಚರಿಸುತ್ತ ಬಂದಿದ್ದಾರೆ. ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ತಿಳಿಸಿದರು.
ನಂತರ ಮಾತನಾಡಿದ ಸ್ಥಳೀಯ ಪಿಎಸ್ಐ ಕಿರಣ ಸತ್ತಿಗೇರಿ, ಮೊಹರಂ ಆಚರಣೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ. ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದೆ, ಶಾಂತಿ ಹಾಗೂ ಸಹಕಾರದಿಂದ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 