ಐಪಿಎಲ್ ವಿರುದ್ಧ ಸಿಪಿಎಲ್ ಹೋರಾಟ ಮಾಡದು: ಪೀಟ್ ರಸೆಲ್
ನವದೆಹಲಿ, ಏ 18,ಪೂರ್ವ ನಿಗದಿಯಂತೆ ಮುಂಬರುವ ಸೆಪ್ಟೆಂಬರ್ ನಲ್ಲಿ ಟಿ20 ಲೀಗ್ ನಡೆಯಲಿದೆ ಎಂದು ಕೆರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೀಟ್ ರಸೆಲ್ ನಿರೀಕ್ಷಿಸಿದ್ದಾರೆ. ಹಾಗೆಯೇ ಕೊರೊನಾ ವೈರಸ್ ನಿಂದಾಗಿ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿರುವ ಐಪಿಎಲ್ ಕುರಿತು ಬಿಸಿಸಿಐ ತನ್ನದೇ ಆದ ವಿಂಡೋ(ಪರ್ಯಾಯ ಮಾರ್ಗ) ವನ್ನು ಕಲ್ಪಿಸಲಿದೆ ಎಂದು ಆಶಿಸಿದ್ದಾರೆ.ಕೋವಿಡ್ -19ನಿಂದಾಗಿ ಐಪಿಎಲ್ 13ನೇ ಆವೃತ್ತಿ ಅಮಾನತುಗೊಂಡಿರುವ ಕಾರಣ ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ಐಪಿಎಲ್ ಆಯೋಜಿಸಲು ಬಿಸಿಸಿಐ ಚಿಂತಿಸುತ್ತಿದೆ. ಇದಕ್ಕಾಗಿ ಏಷ್ಯಾ ಕಪ್ ಮತ್ತು ಟಿ20 ವಿಶ್ವ ಕಪ್ ವೇಳಾಪಟ್ಟಿಯಲ್ಲಿಯೂ ಬದಲಾವಣೆ ತರಬೇಕಿದೆ. ಆಗಸ್ಟ್ 19ರಿಂದ ಸೆಪ್ಟೆಂಬರ್ 26ರವರೆಗೆ ನಿಗದಿಯಾಗಿರುವ ಸಿಪಿಎಲ್ ಐಪಿಎಲ್ ವೇಳಾಪಟ್ಟಿಗೆ ತಾಕಲಾಟ ಉಂಟು ಮಾಡಬಹುದಾಗಿದೆ. ಹೀಗಾಗಿ ಈ ಕುರಿತು ಕ್ರಿಕ್ ಇನ್ಫೋ ಜತೆ ಪ್ರತಿಕ್ರಿಯಿಸಿರುವ ಸಿಪಿಎಲ್ ಸಿಇಒ, ಇದರ ವಿರುದ್ಧ ನಾವು ಹೋಗುವುದಿಲ್ಲ. ಇದೇ ವೇಳೆ ಈ ಕುರಿತು ನಿರ್ಧಾರ ಕೈಗೊಳ್ಳಲು ಬಿಸಿಸಿಐ ಎಲ್ಲ ರೀತಿಯಲ್ಲೂ ಸರ್ವಶಕ್ತವಾಗಿದೆ ಎಂದು ನನಗೆ ತಿಳಿದಿದ್ದರೂ ಸ್ವಲ್ಪ ಸಂವೇದನಾಶೀಲರಾಗಿರಬೇಕು, ಆಟಗಾರರು ಹಾಗೂ ಇತರ ಲೀಗ್ ಗಳು ಏನೂ ಮಾಡುತ್ತಿವೆ ಎಂಬುದನ್ನು ಪರಿಗಣಿಸಬೇಕು, ಎಂದು ರಸೆಲ್ ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 