ಉತ್ತರಪ್ರದೇಶ : ಭಾರಿ ಮಳೆ ಗಾಳಿಗೆ ಬೆಳೆ ಹಾನಿ
ಬಸ್ತಿ, ಮಾ 07, ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಬೀಸುತ್ತಿರುವ ಬಲವಾದ ಗಾಳಿಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ. ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಲವಾಗಿ ಬೀಸಿದ ಗಾಳಿಗೆ ಗೋಧಿ, ಅವರೆಕಾಳು, ಸಾಸಿವೆ ಮುಂತಾದ ಬೆಳೆಗಳಿಗೆ ಹಾನಿಯಾಗಿದೆ ಎನ್ನಲಾಗಿದೆ. ಕೇವಲ 15 ದಿನಗಳ ಹಿಂದಷ್ಟೇ ಗೋಧಿಯನ್ನು ಬಿತ್ತನೆ ಮಾಡಲಾಗಿತ್ತು. ಸಾಸಿವೆ ಬೆಳೆ ಹೂ ಬಿಟ್ಟಿತ್ತು. ಆದರೆ ಇವೆಲ್ಲ ಈಗ ಮಳೆನೀರಿನ ಪಾಲಾಗಿವೆ. ಇದಲ್ಲದೆ ಮಾವು ಬೆಳೆಯೂ ನಷ್ಟವಾಗಿದೆ. ಜೋರಾದ ಗಾಳಿಗೆ ಹೂ ಬಿಟ್ಟಿದ್ದ ಮಾವಿನ ಮರದ ಕೊಂಬೆಗಳು ಮುರಿದಿದ್ದು, ರೈತರು ಕಂಗಾಲಾಗಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 