ರಾವುತರಾಯ ಮಲ್ಲಯ್ಯರ ದೇವಸ್ಥಾನಕ್ಕೆ ಸಿ.ಟಿ.ರವಿ, ಭೇಟಿ: ಸನ್ಮಾನ

ದೇವರಹಿಪ್ಪರಗಿ 15: ಪಟ್ಟಣದ ಐತಿಹಾಸಿಕ ರಾವುತರಾಯ ಮಲ್ಲಯ್ಯರ ದೇವಸ್ಥಾನಕ್ಕೆ ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಹಾಗೂ ನಮೋ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷರಾದ ಚಕ್ರವರ್ತಿ ಸೂಲಿಬೆಲೆ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಬಿಜೆಪಿ ಮಂಡಲದ ಪದಾಧಿಕಾರಿಗಳು ಹಾಗೂ ಮುಖಂಡರಿಂದ ಸನ್ಮಾನಿಸಿ, ಗೌರವಿಸಲಾಯಿತು.