ಬಂದರು ಟ್ರಸ್ಟ್, ಹಡಗುಕಟ್ಟೆ ಕಾರ್ಮಿಕ ಮಂಡಳಿ ಉದ್ಯೋಗಿಗಳಿಗೆ ಪಿಎಲ್ಆರ್ ಯೋಜನೆ ವಿಸ್ತರಣೆಗೆ ಸಚಿವ ಸಂಪುಟ ಒಪ್ಪಿಗೆ
ನವದೆಹಲಿ, ಜ 29: ಯೋಜನೆಯಲ್ಲಿ ಯಾವುದೇ ಬದಲಾವಣೆ ಇಲ್ಲವೇ ತಿದ್ದುಪಡಿ ಮಾಡುವವರೆಗೆ ಸದ್ಯ, ಅಸ್ತಿತ್ವದಲ್ಲಿರುವ ಉತ್ಪಾದಕತೆ ಜೋಡಣೆ ಪುರಸ್ಕಾರ (ಪಿಎಲ್ಆರ್) ಯೋಜನೆಯನ್ನು 2017-18ರ ಆಚೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಈ ಯೋಜನೆಯಿಂದ ವಾರ್ಷಿಕವಾಗಿ 28,821 ಪ್ರಮುಖ ಬಂದರು ಟ್ರಸ್ಟ್ಗಳು ಮತ್ತು ಹಡಗುಕಟ್ಟೆ ಉದ್ಯೋಗಿಗಳಿಗೆ ಪ್ರಯೋಜನವಾಗಲಿದೆ. ಪ್ರಸ್ತುತ ವೇತನ ಮಿತಿಯಲ್ಲಿ ತಿಂಗಳಿಗೆ 7,000 ರೂ.ನಂತೆ ಉತ್ಪಾದಕತೆ ಸಂಯೋಜನೆ ಪುರಸ್ಕಾರ ಲೆಕ್ಕಹಾಕಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಯೋಜನೆಯು ಉತ್ತಮ ಉತ್ಪಾದಕತೆಯನ್ನು ಉತ್ತೇಜಿಸುವುದರೊಂದಿಗೆ ಬಂದರು ವಲಯದಲ್ಲಿ ಉತ್ತಮ ಕೈಗಾರಿಕಾ ಸಂಬಂಧ ಮತ್ತು ಕೆಲಸದ ವಾತಾವರಣವನ್ನು ಬೆಳೆಸುತ್ತಿದೆ.
ಪ್ರಮುಖ ಬಂದರು ಟ್ರಸ್ಟ್ಗಳು ಮತ್ತು ಹಡಗುಕಟ್ಟೆ ಮಂಡಳಿ ಉದ್ಯೋಗಿಗಳಿಗೆ ಉತ್ಪಾದಕತೆ ಸಂಯೋಜನೆಯ ಪುರಸ್ಕಾರ ನೀಡುವ ಯೋಜನೆ ಅಸ್ತಿತ್ವದಲ್ಲಿದೆ. ಇದರಲ್ಲಿ ಉತ್ಪಾದಕತೆ ಸಂಯೋಜನೆ ಪುರಸ್ಕಾರವನ್ನು ಸಂಯೋಜಿತ ಬಂದರುಗಳ ಕಾರ್ಯಕ್ಷಮತೆ ಸೂಚ್ಯಂಕದ ಆಧಾರದ ಮೇಲೆ ನೀಡಲಾಗುತ್ತದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 