ಭಾರತ್ ಬಂದ್ಗೆ ಕರೆ: ಕೊಪ್ಪಳ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ
ಲೋಕದರ್ಶನ ವರದಿ
ಕೊಪ್ಪಳ 08: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಾನಾ ಕಾಮರ್ಿಕ ಸಂಘಟನೆಗಳು ಕರೆ ನೀಡಿರುವ ದೇಶವ್ಯಾಪಿ ಬಂದ್ ಬಿಸಿ ಕೊಪ್ಪಳಕ್ಕೆ ತಟ್ಟಿಲ್ಲ. ಜಿಲ್ಲಾ ಕೇಂದ್ರವಾದ ಕೊಪ್ಪಳ ನಗರ ಸೇರಿದಂತೆ ಜಿಲ್ಲೆಯ ಬಹುಭಾಗ ತಾಲೂಕಾ, ಪಟ್ಟಣ ಕೇಂದ್ರಗಳಲ್ಲಿ ಭಾರತ ಬಂದ್ ಸಂಪೂರ್ಣ ವಿಫಲವಾಗಿದೆ ಎಂದು ಹೇಳಬಹುದಾಗಿದೆ.
ಜನಜೀವನ ಯತಾಸ್ಥಿತಿಯಲ್ಲಿ ಮುಂದುವರೆದಿದೆ. ಶಾಲಾ ಕಾಲೇಜುಗಳಿಗೆ ಬಂದ್ ಶೇ.25% ರಷ್ಟು ತಟ್ಟಿದೆ. ಕೆಲವು ಶಾಲೆ ಅದರಲ್ಲೂ ಖಾಸಗಿ ಶಾಲೆ ಮುಂಜಾಗ್ರತೆ ಕ್ರಮವಾಗಿ ಬಂದ್ಗೆ ರಜೆ ಘೋಷಿಸಿದೆ. ಸರಕಾರಿ ಶಾಲಾ ಕಾಲೇಜು ಸೇರಿದಂತೆ ಕಛೇರಿಗಳು ಯಥಾವತ್ತಾಗಿ ಕಾರ್ಯನಿರ್ವಹಿಸಿದೆ. ಬ್ಯಾಂಕುಗಳು ತನ್ನ ವಹಿವಾಟು ಸ್ಥಗೀತಗೊಳಿಸಿಲ್ಲ. ಒಂದೆರಡು ಪ್ರಮುಖ ಬ್ಯಾಂಕ್ ಬಂದಾಗಿರುವ ಬಗ್ಗೆ ಮಾಹಿತಿ ದೊರೆತಿದೆ. ಬಸ್ ಸಂಚಾರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅಂಗಡಿಗಳು ಮುಂಗಟ್ಟುಗಳು ಬಂದಾಗಿಲ್ಲ. ಕಾಮರ್ಿಕ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಕೇಂದ್ರ ಸರಕಾರದ ಬೆಲೆ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಪೌರತ್ವ ಖಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕಛೇರಿಗೆ ತೆರಳಿ ಸರಕಾರಕ್ಕೆ ಮನವಿ ಪತ್ರ ಅಪರ್ಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 