ಬಲ್ಡೋಟ ಅತಿಕ್ರಮಿಸಿದ ಬಸಾಪುರ ಕೆರೆ ಸಂಘರ್ಷಕ್ಕೆ ಕರೆ : ಸುಪ್ರೀಂ ಕೋರ್ಟ್‌ ತೀರ​‍್ಿನ ಭಾಗವಾಗಿಲ್ಲ ಸಾಬೀತುಪಡಿಸಲು ಸಿದ್ಧ: ಕಣವಿ

ಬಲ್ಡೋಟ ಅತಿಕ್ರಮಿಸಿದ ಬಸಾಪುರ ಕೆರೆ ಸಂಘರ್ಷಕ್ಕೆ ಕರೆ : ಸುಪ್ರೀಂ ಕೋರ್ಟ್‌ ತೀರ​‍್ಿನ ಭಾಗವಾಗಿಲ್ಲ ಸಾಬೀತುಪಡಿಸಲು ಸಿದ್ಧ: ಕಣವಿ  Call for conflict over Basapura Lake encroached by Baldota: Supreme Court ready to prove it is not p

ಕೊಪ್ಪಳ 11:  ನಗರಸಭೆ ಆವರಣದಲ್ಲಿ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ನಡೆದಿರುವ 193ನೇ ದಿನದ ಧರಣಿ ವೇದಿಕೆಯಲ್ಲಿ ಸುಪ್ರೀಂ ಕೋರ್ಟ್‌ ತೀರ​‍್ಿನಲ್ಲಿ ಬಸಾಪುರ ಕೆರೆ ಬಲ್ಡೋಟ ಕಂಪನಿಗೆ ಸೇರಿದೆ ಎಂದು ಎಲ್ಲೂ ಹೇಳಿಲ್ಲವೆಂದು ವಕೀಲ ರಾಜು ಬಾಕಳೆ ಅವರು ಭೂ-ಬಾಧಿತರಾಗಿ 16 ವರ್ಷ ನ್ಯಾಯಾಲಯದಲ್ಲಿ ಹೋರಾಡಿದ ಅನುಭವ ಹಂಚಿಕೊಳ್ಳುತ್ತಾ ಬಸಾಪುರ ಕೆರೆ ಮತ್ತು ಕಾನೂನು ನಡೆ ಸಂವಾದ ವಿಷಯ ಮಂಡನೆ ಮಾಡಿ ಮಾತನಾಡಿದರು. ಸಂವಾದದ ವಿಷಯ ಪ್ರಸ್ತಾಪ ಮಾಡಿ ಕೆರೆಯನ್ನು 30 ವರ್ಷ ಅವಧಿಗೆ ಷರತ್ತು ವಿಧಿಸಿ ಜಿಲ್ಲಾಧಿಕಾರಿ 33 ಲಕ್ಷಕ್ಕೆ ಮಂಜೂರಿ ಮಾಡುವಾಗ ಇದು ಕೆರೆಯಲ್ಲ ಪರಂಪೋಕ ಜಮೀನು ಎನ್ನುವ ಕತೆ ಕಟ್ಟಲು ಪ್ರಯಾಸಪಟ್ಟಿದ್ದು ಮೇಲ್ನೋಟದಲ್ಲೆ ಗೊತ್ತಾಗುತ್ತದೆ.

2003ರಲ್ಲಿ ಬಸಾಪುರಕೆರೆಯಲ್ಲಿ ಆಗಿನ ಜಿಲ್ಲಾಧಿಕಾರಿ ನಾಗಲಾಂಬಿಕಾದೇವಿ 3 ಕಂತಿನಲ್ಲಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಯೋಜನೆಯಡಿ ಬರಗಾಲ ಕಾಮಗಾರಿ ಮಾಡಿಸಿ ಹೂಳೆತ್ತಿದ್ದಾರೆ ಅಂದೇ ಬರೋಬ್ಬರಿ 10 ಲಕ್ಷ ಅದಕ್ಕೆ ವೆಚ್ಚ ಮಾಡಲಾಗಿದೆ. 2006ರಲ್ಲಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಇದು ಕೆರೆಯಾದ ಕಾರಣದಿಂದ ಡಿನೋಟಿಫೈ ಮಾಡಲು ಬರುವುದಿಲ್ಲ ಎಂದು ಹೇಳುತ್ತಾರೆ. ಹಾಗಾದರೆ 30 ವರ್ಷ ಲೀಸ್ ಕಂ. ಸೇಲ್ ಮಾಡಿ, ದುರ್ಬಲ ಷರತ್ತು ವಿಧಿಸಿ ಕಾಲಾವಧಿ ಮೀರಿದ ಮೇಲೆ ಸರಕಾರದ ಗಮನಕ್ಕೆ ತಂದು ಪರಭಾರೆ ಮಾಡಬಹುದು ಎಂದು ಹೇಳಿದ್ದು ಕೆರೆ ಸಂರಕ್ಷಣೆ ಮಾಡುವ ಎಲ್ಲಾ ಕಾನೂನು ನಿಯಮಾವಳಿಗಳನ್ನು ಉಲ್ಲಂಘಿಸಿದಂತಾಗಿದೆ. ಕೆಳಹಂತದ ಕಂದಾಯ, ಸರ್ವೆ, ಸಹಾಯಕ ಆಯುಕ್ತರು, ಜಿಲ್ಲಾಧಿಕಾರಿಗಳು ಎಲ್ಲರೂ ಸೇರಿ ಕಂಪನಿಗೆ ಕೆರೆ ಮಾರಾಟ ಮಾಡಲು ಅನುವು ಮಾಡಿದ್ದಾರೆ. ಇದರ ಮೇಲೆ ಉನ್ನತ ಮಟ್ಟದ ತನಿಖೆ ನಡೆಸಿ ನಿವೃತ್ತಿಯಾದವರನ್ನೂ ಬಿಡದೆ ತಪ್ಪಿತಸ್ಥರಾಗುವವರ ಮೇಲೆ ಕ್ರಮವಾಗಬೇಕು ಎಂದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ. ಕಣವಿ ಮಾತನಾಡಿ, ನಾನು ಸುಪ್ರೀಂ ಕೋರ್ಟ್‌ ಆದೇಶ ಓದಿದ್ದೇನೆ.

ಅದರಲ್ಲಿ ಬಸಾಪುರ ಕೆರೆಗೆ ಸಂಬಂಧಿಸಿದ ಯಾವುದೇ ಉಲ್ಲೇಖಗಳಿಲ್ಲ. ನಾನು ವಕೀಲನಾಗಿ ಕಾನೂನು ಅಭಿಪ್ರಾಯವನ್ನು ಜಿಲ್ಲಾಧಿಕಾರಿಯವರಿಗೆ ಕೊಡಲು ಸಿದ್ದನಿದ್ದೇನೆ. ರೈತರ ಮತ್ತು ಕೊಪ್ಪಳ ಜನರ ಪರವಾಗಿ ಹೋರಾಟಕ್ಕೆ ವಕೀಲರ ಸಂಘದ ಮೂಲಕ ಬೆಂಬಲಿಸಿ ಜಿಲ್ಲಾಧಿಕಾರಿಗಳಿಗೆ ಪತ್ರ ಕೊಡುತ್ತೇನೆ, ಅಲ್ಲದೇ ಒಂದು ವಾರದಲ್ಲಿ ಇಡೀಯಾಗಿ ಉಚ್ಛ ಮತ್ತು ಸರ್ವೋಚ್ಚ ನ್ಯಾಯಾಲಯಗಳ ಸಾರಾಂಶವನ್ನು ಲಿಖಿತವಾಗಿ ಜಿಲ್ಲಾಡಳಿತಕ್ಕೆ ಕೊಡುವದಾಗಿ ಹೇಳಿದರು. ಹಿರಿಯ ವಕೀಲ ಪೀರಾಹುಸೇನ್ ಹೊಸಳ್ಳಿ ಮಾತನಾಡಿ, ಸುಪ್ರೀಂ ಕೋರ್ಟ್‌ ಮತ್ತು ಕೆರೆ ಸಂರಕ್ಷಣೆಗೆ ಸಂಬಂಧಿಸಿದ ಕಾನೂನು ನಿಯಮಾವಳಿಗಳು ಬಲಿಷ್ಠವಾಗಿವೆ. ಜ. ಮಾರ್ಕಾಂಡೇಯ ಕಟ್ಜು ತೀಪು ಉಲ್ಲೇಖ ಮಾಡಿದ ಅವರು ಇಂತಹ ಪ್ರಬಲ ಆದೇಶಗಳು ಕೆರೆಕಟ್ಟೆ ರಕ್ಷಣೆಗಾಗಿ ಬಂದಿವೆ. ನೈಸರ್ಗಿಕ ಸಮುದಾಯದ ಸ್ವತ್ತಾದ ಕೆರೆ, ಸರೋವರಗಳನ್ನು ಯಾವುದೇ ಸರ್ಕಾರಕ್ಕೆ ಮಾರುವ ಹಕ್ಕು ಇಲ್ಲ, ಸರ್ವೋಚ್ಚ ನ್ಯಾಯಾಲಯದ ಅನೇಕ ಆದೇಶಗಳು ನಮ್ಮಲ್ಲಿದ್ದು ಅವುಗಳನ್ನು ಕೊಡಲು ಸಿದ್ಧ ಎಂದು ಪ್ರತಿಪಾದಿಸಿದರು.

ಸಂವಾದದಲ್ಲಿ ಸಂಗಪ್ಪ ವಕ್ಕಳದ, ಜಂಟಿ ಕ್ರಿಯಾ ವೇದಿಕೆ ಸಂಚಾಲಕರಾದ ಮಂಜುನಾಥ ಜಿ. ಗೊಂಡಬಾಳ, ಡಾ. ಮಂಜುನಾಥ ಸಜ್ಜನ್, ಸಾವಿತ್ರಿ ಮುಜುಮದಾರ, ಶಿವಾನಂದಯ್ಯ ಬೀಳಗಿಮಠ, ಶರಣು ಶೆಟ್ಟರ್, ಕಾಶಪ್ಪ ಚಲವಾದಿ ಪ್ರಶ್ನೋತ್ತರದಲ್ಲಿ ಪಾಲ್ಗೊಂಡು ಚರ್ಚಿಸಿದರು. ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಸಂಚಾಲಕ ಮಲ್ಲಿಕಾರ್ಜುನ ಬಿ. ಗೋನಾಳ, ಪ್ರಕಾಶಕ ಡಿ.ಎಂ.ಬಡಿಗೇರ, ಮಹಾಂತೇಶ ಕೊತಬಾಳ, ಸರೋಜಾ ಬಾಕಳೆ, ಮಾಲಾ ಬಡಿಗೇರ, ಇಂಜೀನೀಯರ್ ಅನುರಾಧಾ, ವಿದ್ಯಾ ನಾಲ್ವಾಡ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಭೀಮಸೇನ ಕಲಕೇರಿ, ಮೂಕಪ್ಪ ಮೇಸ್ತ್ರಿ ಬಸಾಪುರ, ಡಾ. ಬಸವರಾಜ ಪೂಜಾರ, ಶಾಂತಯ್ಯ ಅಂಗಡಿ, ಹನುಮಂತಪ್ಪ ಗೊಂದಿ, ಯಲ್ಲಪ್ಪ ಬಂಡಿ, ಎಂ.ಕೆ.ಸಾಹೇಬ, ವಕೀಲ ಬಿ.ಎಸ್‌.ವೀರಾಪೂರ, ವಿನಯ ಸಜ್ಜನ್, ಶಂಭುಲಿಂಗಪ್ಪ ಹರಗೇರಿ, ನಾಗಪ್ಪ ಕಿನ್ನಾಳ, ರವಿ ಕಾಂತನವರ, ಸುಭಾನ್ ಸಾಬ್ ನೀರಲಗಿ, ಬಸವರಾಜ ಪೂಜಾರ ಕಾಸನಕಂಡಿ, ಪಂಪಣ್ಣ ಚಿಂತಪಲ್ಲಿ, ನಾಗರಾಜ ಕುಷ್ಟಗಿ, ಮಹಾದೇವಪ್ಪ ಮಾವಿನಮಡು, ನಾಗರಾಜ ಯಲಿಗಾರ, ಗೋಪಾಲ ಕುಂಬಾರ, ವಿಜಯ ಮಹಾಂತೇಶ ಹಟ್ಟಿ, ಶಿವಪ್ಪ ಜಲ್ಲಿ, ಮಲ್ಲಪ್ಪ ಎಸ್‌.ಎಚ್, ವೈ. ಸತ್ಯನಾರಾಯಣ, ವಿನೋದ, ಶಿವರಾಜ ಚಲವಾದಿ ಪಾಲ್ಗೊಂಡರು.