ಕಿಸಾನ್ ಸಮ್ಮಾನ್ ನೋಂದಣಿಗೆ ರೈತರಿಗೆ ಕರೆ
ಕಾರವಾರ ; ರೈತರು ತಮ್ಮ ಆದಾಯ ವೃದ್ಧಿಸಿಕೊಳ್ಳಲು ಕೇಂದ್ರ ಸಕರ್ಾರದ ಪ್ರಧಾನಮಂತ್ರಿಗಳ ಕಿಸಾನ್ ಸಮ್ಮಾನ್ ಯೋಜನೆಯಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕಾರವಾರ ತಹಸೀಲ್ದಾರ್ ಆರ್.ವಿ.ಕಟ್ಟಿ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಕುರಿತು ಕಾರವಾರಲ್ಲಿ ಬುಧವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ಲಾಭದಾಯಕವಾಗಿದ್ದು ಅರ್ಹ ರೈತರು ತಮ್ಮ ಸಮೀಪದ ಗ್ರಾಮ ಪಂಚಾಯ್ತಿ, ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ, ನಾಡಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರದಲ್ಲಿ ಆಧಾರ ಕಾಡರ್ು, ಬ್ಯಾಂಕ್ ಪಾಸ್ಬುಕ್ ಹಾಗೂ ಸ್ವಯಂ ದೃಢೀಕರಣಪತ್ರದೊಂದಿಗೆ ತಮ್ಮ ಹೆಸರನ್ನು ನೋಂದಾಯಿಸುವಂತೆ ತಿಳಿಸಿದರು.
ಕಿಸಾನ್ ಸಮ್ಮಾನ್ ಯೋಜನೆಗೆ ಈ ಹಿಂದೆ ಇದ್ದ 2 ಹೆಕ್ಟೇರ್ ಕ್ಷೇತ್ರದ ಮಿತಿಯನ್ನು ತೆಗೆದು ಹಾಕಲಾಗಿದ್ದು ರೈತರು ಈ ಯೋಜನೆಯ ಲಾಭ ಪಡೆಯುವಂತೆ ಅವರು ಕೋರಿದ್ದಾರೆ.
ಸಭೆಯಲ್ಲಿ ತಾಲೂಕು ಪಂಚಾಯ್ತಿ ಕಾರ್ಯನಿವರ್ಾಹಕ ಅಧಿಕಾರಿ ಡಾ.ಆನಂದ್, ಸಹಾಯಕ ಕೃಷಿ ನಿದರ್ೇಶಕ ಗುಡಿಗಾರ್ ಉಪಸ್ಥಿತರಿದ್ದರು. ತಾಲೂಕಿನ ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆ ಸಿಬ್ಬಂದಿಗೆ ರೈತರ ನೋಂದಣಿ ಕುರಿತಂತೆ ತರಬೇತಿ ನೀಡಲಾಯಿತು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 