ವೈಜ್ಞಾನಿಕ ಚಿಂತನೆಗಳನ್ನು ರೂಢಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ
ಹಾವೇರಿ: ಮಕ್ಕಳು ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ವಿಜ್ಞಾನ ಮತ್ತು ವೈಚಾರಿಕ ಚಿಂತನೆಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು. ಮೂಢನಂಬಿಕೆಗಳನ್ನು ಜೀವನದಿಂದ ಕೈಬಿಡಬೇಕು ಎಂದು ವಿದ್ಯಾಥರ್ಿಗಳಿಗೆ ಕಬ್ಬೂರ ಗ್ರಾ.ಪಂ.ಅಧ್ಯಕ್ಷ ತಿರಕಪ್ಪ ಕುಳ್ಳಣ್ಣನವರ ಕರೆ ನೀಡಿದರು.
ಕಬ್ಬೂರ ಸಮೂಹ ಸಂಪನ್ಮೂಲ ಕೇಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಕನರ್ಾಟಕ ಇವರ ಆಶ್ರಯದಲ್ಲಿ ಕಬ್ಬೂರ ಗ್ರಾಮದ ಮಾದರಿ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆ ಇವರ ಆಶ್ರಯದಲ್ಲಿ ಡಿ. 12 ರಂದು ಕಬ್ಬೂರ ಸಮೂಹ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪಠ್ಯದ ಜೊತೆಗೆ ವೈಚಾರಿಕತೆ, ವಿಜ್ಞಾನಗಳ ಅರಿವನ್ನು ಹೊಂದಬೇಕು. ಮೂಢ ನಂಬಿಕೆಗಳನ್ನು ಸಮಾಜದಿಂದ ದೂರಮಾಡಲು ಶ್ರಮಿಸಬೇಕು. ವಿದ್ಯಾಥರ್ಿಗಳಾದ ತಾವೆಲ್ಲ ಸಮಾಜವನ್ನು ಜಾಗೃತಿಗೊಳಿಸಬೇಕು ಎಂದು ಸಲಹೆ ನೀಡಿದರು.
ಗ್ರಾಮದಲ್ಲಿ ವಿಜ್ಞಾನದ ಜಾಗೃತಿಗಾಗಿ ಅಕ್ಷರ ಬಂಡಿ ಮೆರವಣಿಗೆ ಆಯೋಜಿಸಿ ಪ್ರಭಾತಪೇರಿಯನ್ನು ಕ್ಷೇತ್ರದ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಉದ್ಘಾಟಿಸಿದರು. ಹಾಡುಗಾತರ್ಿ ರುಬೀನಾ ನದಾಫ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಸ್ಪೂತರ್ಿ ತುಂಬಿದರು. ಕಾರ್ಯಕ್ರಮದ ಉದ್ಘಾಟನೆಗಾಗಿ ನೀರಿನ ಚಿಮ್ಮುವ ಕಾರಂಜಿ ಹಾಗೂ ನ್ಯೂಟನ್ ಚಕ್ರಗಳನ್ನು ತಯಾರಿಸಿ ತಮ್ಮ ವಿಜ್ಞಾನ ಪ್ರತಿಭೆಯನ್ನು ಪ್ರದಶರ್ಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷರಾದ ಬಸವರಾಜ ದ್ಯಾಮಣ್ಣನವರ ವಹಿಸಿದ್ದರು. ಶಿಕ್ಷಣ ಇಲಾಖೆಯ ಸಿದ್ದರಾಜ, ಎಸ್.ಆರ್.ಹಿರೇಮಠ, ನಾಗರಾಜ ಇಚ್ಚಂಗಿ, ಜೆ.ಎಂ.ಜಾವೂರ, ನಟರಾಜ ಬಿದರಿ, ವಿ.ಎಸ್.ಪಡಗೋದಿ, ಸಿ.ಎಸ್. ಸನದಿ ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 