ಬೆಳ್ಳಿ-ಬೆಡಗು ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ
ಲೋಕದರ್ಶನ ವರದಿ
ಮುನವಳ್ಳಿ 9: ಇದೇ ಜ. 14 ಮತ್ತು 15 ರಂದು ಹರಿಹರ ದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಹಾಗೂ ಪಂಚಮಸಾಲಿ ಜಗದ್ಗುರು ಪೀಠದಿಂದ ಜರುಗುವ ಹರಜಾತ್ರಾ ಮಹೋತ್ಸವ ಮತ್ತು ಬೆಳ್ಳಿ-ಬೆಡಗು ಕಾರ್ಯಕ್ರಮದ ಹಿನ್ನಲೆಯಲ್ಲಿ ಪಟ್ಟಣದ ಪಂಚಮಸಾಲಿ ಸಂಘದ ವತಿಯಿಂದ ಪೂರ್ವಭಾವಿ ಸಭೆ ಜ. 8 ರಂದು ರಾತ್ರಿ ಜರುಗಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಂಘದ ಮುಖಂಡರಾದ ಶಿವಾನಂದ ಮೇಟಿ ಹಾಗೂ ಕಲ್ಲಪ್ಪ ನಲವಡೆ ಪಂಚಮಸಾಲಿ ಸಂಘ ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಬೆಳ್ಳಿ-ಬೆಡಗು ಕಾರ್ಯಕ್ರಮ ಜೊತೆಗೆ ಯುವ ಸಮಾವೇಶ ಮತ್ತು ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಬಂಧು ಬಾಂಧವರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಲಾಯಿತು.
ಈ ಸಂದರ್ಭದಲ್ಲಿ ಪಂಚಪ್ಪ ಹನಸಿ, ರವಿ ದ್ಯಾಮನಗೌಡರ, ರುದ್ರಗೌಡ ಕಳಸನಗೌಡ್ರ, ಚನ್ನಪ್ಪಗೌಡ ದ್ಯಾಮನಗೌಡ್ರ, ಎಂ.ಎ. ಕಮತಗಿ, ದ್ಯಾಮನಗೌಡ ಬಕಾಡೆ, ರಾಮನಗೌಡ ಗೀದಿಗೌಡ್ರ,ಸತ್ಯಪ್ಪ ಅಡವಿ,ಶ್ರೀಕಾಂತ ಮಲಗೌಡ್ರ, ಸುಭಾಸ ಗೀದಿಗೌಡ್ರ, ಬಸವರಾಜ ಚುಳಕಿ, ಮಂಜುನಾಥ ನವಲಗುಂದ, ರಮೇಶ ಗಂಗನ್ನವರ, ಗುರು ಚಂದರಗಿ,ಉಮೇಶ ಚುಳಕಿ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 