ಬೆಳ್ಳಿ-ಬೆಡಗು ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ
ಲೋಕದರ್ಶನ ವರದಿ
ಮುನವಳ್ಳಿ 9: ಇದೇ ಜ. 14 ಮತ್ತು 15 ರಂದು ಹರಿಹರ ದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಹಾಗೂ ಪಂಚಮಸಾಲಿ ಜಗದ್ಗುರು ಪೀಠದಿಂದ ಜರುಗುವ ಹರಜಾತ್ರಾ ಮಹೋತ್ಸವ ಮತ್ತು ಬೆಳ್ಳಿ-ಬೆಡಗು ಕಾರ್ಯಕ್ರಮದ ಹಿನ್ನಲೆಯಲ್ಲಿ ಪಟ್ಟಣದ ಪಂಚಮಸಾಲಿ ಸಂಘದ ವತಿಯಿಂದ ಪೂರ್ವಭಾವಿ ಸಭೆ ಜ. 8 ರಂದು ರಾತ್ರಿ ಜರುಗಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಂಘದ ಮುಖಂಡರಾದ ಶಿವಾನಂದ ಮೇಟಿ ಹಾಗೂ ಕಲ್ಲಪ್ಪ ನಲವಡೆ ಪಂಚಮಸಾಲಿ ಸಂಘ ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಬೆಳ್ಳಿ-ಬೆಡಗು ಕಾರ್ಯಕ್ರಮ ಜೊತೆಗೆ ಯುವ ಸಮಾವೇಶ ಮತ್ತು ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಬಂಧು ಬಾಂಧವರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಲಾಯಿತು.
ಈ ಸಂದರ್ಭದಲ್ಲಿ ಪಂಚಪ್ಪ ಹನಸಿ, ರವಿ ದ್ಯಾಮನಗೌಡರ, ರುದ್ರಗೌಡ ಕಳಸನಗೌಡ್ರ, ಚನ್ನಪ್ಪಗೌಡ ದ್ಯಾಮನಗೌಡ್ರ, ಎಂ.ಎ. ಕಮತಗಿ, ದ್ಯಾಮನಗೌಡ ಬಕಾಡೆ, ರಾಮನಗೌಡ ಗೀದಿಗೌಡ್ರ,ಸತ್ಯಪ್ಪ ಅಡವಿ,ಶ್ರೀಕಾಂತ ಮಲಗೌಡ್ರ, ಸುಭಾಸ ಗೀದಿಗೌಡ್ರ, ಬಸವರಾಜ ಚುಳಕಿ, ಮಂಜುನಾಥ ನವಲಗುಂದ, ರಮೇಶ ಗಂಗನ್ನವರ, ಗುರು ಚಂದರಗಿ,ಉಮೇಶ ಚುಳಕಿ ಇತರರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 