ಪ್ಲಾಸ್ಟಿಕ್ ಮಾಲಿನ್ಯ ತಡೆಯಲು ಕರೆ
ಬೆಳಗಾವಿ, 1: ದಿನ ನಿತ್ಯ ಜೀವನದಲ್ಲಿ ಅತಿಯಾಗಿ ಪ್ಲಾಸ್ಟಿಕ್ ಬಳಸಿ ಬಿಸಾಡುತ್ತಿರುವುದರಿಂದ ಅವುಗಳನ್ನು ತಿನ್ನುವ ಜಾನುವಾರಗಳು, ಜಲಚರಗಳು ನಿರಂತರವಾಗಿ ಸಾವನ್ನಪ್ಪುತ್ತಿವೆ. ನಾವೆಲ್ಲ ಪ್ಲಾಸ್ಟಿಕ್ ಮಾಲಿನ್ಯ ತಡೆಯಲು ಶ್ರಮಿಸೋಣ ಎಂದು ಪರಿಸರ ಮಿತ್ರ ಸಂಘದ ಅಧ್ಯಕ್ಷರಾದ ಪ್ರೊ|| ಜಿ. ಕೆ. ಖಡಬಡಿ ಅಭಿಪ್ರಾಯಪಟ್ಟರು. ಅವರು ಇಂದು ನಗರದ ಡಾ// ಸ.ಜ. ನಾಗಲೋಟಿಮಠ ವಿಜ್ಞಾನ ಕೇಂದ್ರಕ್ಕೆ ತಮ್ಮ ಜನ್ಮ ದಿನದ ಅಂಗವಾಗಿ ಸಸಿ ವಿತರಿಸಿ ಮಾತನಾಡಿದರು.
ಮುಂದುವರೆದು ಮಾತನಾಡಿದ ಅವರು ನಮಗಿರುವುದು ಇದು ಒಂದೇ ಭೂಮಿ ಈ ಭೂಮಿಯ ಮೇಲಿನ ಪರಿಸರ ಉಳಿಸಿ, ಬೆಳೆಸಿ ಆ ಮೂಲಕ ಮನುಕುಲ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಕರಾಮಾನಿ ಮಂಡಳಿಯ ಅಧಿಕಾರಿಗಳಾದ ಡಾ|| ಜಿ. ಎಂ. ಪಾಟೀಲ, ವಿಜ್ಞಾನ ಕೇಂದ್ರದ ಯೋಜನಾ ಸಹಾಯಕ ರಾಜಶೇಖರ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 