ಪ್ಲಾಸ್ಟಿಕ್ ಮಾಲಿನ್ಯ ತಡೆಯಲು ಕರೆ
ಬೆಳಗಾವಿ, 1: ದಿನ ನಿತ್ಯ ಜೀವನದಲ್ಲಿ ಅತಿಯಾಗಿ ಪ್ಲಾಸ್ಟಿಕ್ ಬಳಸಿ ಬಿಸಾಡುತ್ತಿರುವುದರಿಂದ ಅವುಗಳನ್ನು ತಿನ್ನುವ ಜಾನುವಾರಗಳು, ಜಲಚರಗಳು ನಿರಂತರವಾಗಿ ಸಾವನ್ನಪ್ಪುತ್ತಿವೆ. ನಾವೆಲ್ಲ ಪ್ಲಾಸ್ಟಿಕ್ ಮಾಲಿನ್ಯ ತಡೆಯಲು ಶ್ರಮಿಸೋಣ ಎಂದು ಪರಿಸರ ಮಿತ್ರ ಸಂಘದ ಅಧ್ಯಕ್ಷರಾದ ಪ್ರೊ|| ಜಿ. ಕೆ. ಖಡಬಡಿ ಅಭಿಪ್ರಾಯಪಟ್ಟರು. ಅವರು ಇಂದು ನಗರದ ಡಾ// ಸ.ಜ. ನಾಗಲೋಟಿಮಠ ವಿಜ್ಞಾನ ಕೇಂದ್ರಕ್ಕೆ ತಮ್ಮ ಜನ್ಮ ದಿನದ ಅಂಗವಾಗಿ ಸಸಿ ವಿತರಿಸಿ ಮಾತನಾಡಿದರು.
ಮುಂದುವರೆದು ಮಾತನಾಡಿದ ಅವರು ನಮಗಿರುವುದು ಇದು ಒಂದೇ ಭೂಮಿ ಈ ಭೂಮಿಯ ಮೇಲಿನ ಪರಿಸರ ಉಳಿಸಿ, ಬೆಳೆಸಿ ಆ ಮೂಲಕ ಮನುಕುಲ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಕರಾಮಾನಿ ಮಂಡಳಿಯ ಅಧಿಕಾರಿಗಳಾದ ಡಾ|| ಜಿ. ಎಂ. ಪಾಟೀಲ, ವಿಜ್ಞಾನ ಕೇಂದ್ರದ ಯೋಜನಾ ಸಹಾಯಕ ರಾಜಶೇಖರ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 