ಕ್ಯಾನ್ಸರ್ ವಿರುದ್ಧ ಪ್ರಚಾರ ಅಭಿಯಾನ ಚುರುಕುಗೊಳಿಸಬೇಕಿದೆ: ಸಂಸದ ಪೋದ್ದಾರ್
ನವದೆಹಲಿ, ಫೆ .06, ದೇಶದ ಜನರ ಸಾವಿಗೆ ಎರಡನೇ ಅತಿದೊಡ್ಡ ಕಾರಣವಾಗಿ ಹೊರಹೊಮ್ಮಿರುವ ಮಾರಣಾಂತಿಕ ಕಾಯಿಲೆ ಕ್ಯಾನ್ಸರ್ ವಿರುದ್ಧ ಪ್ರಚಾರ ಅಭಿಯಾನವನ್ನು ಚುರುಕುಗೊಳಿಸುವಂತೆ ಬಿಜೆಪಿ ಶಾಸಕ ಮಹೇಶ್ ಪೋದ್ದಾರ್ ರಾಜ್ಯಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದೇಶದಲ್ಲಿ ಹೆಚ್ಚಿನ ಕ್ಯಾನ್ಸರ್ ನಿಯಂತ್ರಣ ಸಂಸ್ಥೆಗಳನ್ನು ಸ್ಥಾಪಿಸಬೇಕು ಇದರಿಂದಾಗಿ ಹೆಚ್ಚಿನ ರೋಗಿಗಳು ಶೀಘ್ರದಲ್ಲಿಯೇ ಚಿಕಿತ್ಸೆ ಪಡೆಯುತ್ತಾರೆ ಎಂದು ಸರ್ಕಾರಕ್ಕೆ ಮನವಿ ಮಾಡಿದ ಪೋದ್ದಾರ್, ಇತ್ತೀಚಿನ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ವರದಿಯನ್ನು ಉಲ್ಲೇಖಿಸಿ, ಹತ್ತು ಜನರಲ್ಲಿ ಒಬ್ಬರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಮತ್ತು ಪ್ರತಿ 15 ಜನರಲ್ಲಿ ಒಬ್ಬರು ಸಾವನ್ನಪ್ಪುತ್ತಾರೆ ಎಂದು ರಾಜ್ಯಸಭೆಗೆ ತಿಳಿಸಿದರು. ಮತ್ತೊಬ್ಬ ಬಿಜೆಪಿ ಶಾಸಕ ವಿನಯ್ ಸಹಸ್ರಬುದ್ದೆ ಅವರು ಅಂಗವಿಕಲರಿಗೆ ಅಥವಾ 'ದಿವ್ಯಾಂಗ’ ರಿಗಾಗಿ ರಾಂಪ್ಗಳ ವಿನ್ಯಾಸವನ್ನು ಸುಧಾರಿಸಬೇಕು ಹಾಗೂ ಅಂಗವಿಕಲರ ಖಾಲಿ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ಒತ್ತಾಯಿಸಿದರು.ದೇಶದಲ್ಲಿ ಪೊಲೀಸ್ ಸಿಬ್ಬಂದಿಗೆ ಹೆಚ್ಚಿನ ತರಬೇತಿ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಬಿಜೆಪಿ ಸದಸ್ಯ ಸಂಜಯ್ ಸೇಠ್ ಒತ್ತಾಯಿಸಿದರು. ಐದು ಲಕ್ಷಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯ ಹುದ್ದೆಗಳು ಖಾಲಿ ಇವೆ ಮತ್ತು ಉತ್ತರ ಪ್ರದೇಶದಲ್ಲಿ ಮಾತ್ರ ಈ ಸಂಖ್ಯೆ ಒಂದು ಲಕ್ಷದಷ್ಟಿದೆ ಎಂದು ಅವರು ಹೇಳಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 