ಯುವ ಮತ್ತು ಭಾವಿ ಮತದಾರರ ನೊಂದಣಿ ಕುರಿತು ಅಭಿಯಾನ ಕಾರ್ಯಕ್ರಮ
ಬೆಳಗಾವಿ, 15: ಬೆಳಗಾವಿ ಕೆ.ಎಲ್.ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ನವೆಂಬರ್ 14 ರಂದು ನಡೆದ 2019ನೇ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಕುರಿತು "ಯುವ ಮತ್ತು ಭಾವಿ ಮತದಾರರ ನೊಂದಣಿ ಕುರಿತು ಅಭಿಯಾನ ಕಾರ್ಯಕ್ರಮ" ನಡೆಸಲಾಯಿತು. ಹಾಗೂ ಹರಿಜನ ಕಾಲೋನಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡಗಳ ಮನೆ ಮನೆಗೆ ಹೋಗಿ ಯುವ ಮತ್ತು ಭಾವಿ ಮತದಾರರ ನೊಂದಣಿ ಕುರಿತು ಅಭಿಯಾನ ಕಾರ್ಯಕ್ರಮದ ಬಗ್ಗೆ ಜನರಿಗೆ ಜಾಗೃತಿ ನೀಡಲಾಯಿತು ಈ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆಯ ಮಹಾನಗರ ಪಾಲಿಕೆ ಆಯುಕ್ತರಾದ ಶಶಿಧರ. ಕುರೆರ, ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳಾದ ರಾಮಚಂದ್ರನ್ ಆರ್., ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿಗಳಾದ ಶಂಕರಾನಂದ. ಬನಶಂಕರಿಯವರು, ಬೆಳಗಾವಿ ಕೆ.ಎಲ್.ಇ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರು ಹಾಗೂ ಕಾಲೇಜಿನ ಎಲ್ಲ ವಿದ್ಯಾಥರ್ಿಗಳು ಭಾಗವಹಿಸಿದ್ದರು.
ರಾಮಚಂದ್ರನ್ ಆರ್. ಇವರು ವಿದ್ಯರ್ಾಥಿಗಳನ್ನು ಉದ್ದೇಶಿಸಿ ಮಾತನಾಡಿ, ಮತದಾನ ಪಟ್ಟಿ ಪರಿಷ್ಕರಣೆಗೆ 20-11-2018ರ ರಂದು ಕೊನೆಯ ದಿನಾಂಕವಿದ್ದು, ದಿನಾಂಕ:01-01-2001ರ ಹಿಂದೆ ಜನಸಿದ ಪ್ರತಿಯೊಬ್ಬರು, ನಮೂನೆ 6ನ್ನು ಭತರ್ಿ ಮಾಡಿ ಮತದಾರರ ನೊಂದಣಿ ಅಧಿಕಾರಿಗಳಿಗೆ ನೀಡಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿಕೊಂಡು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಕ್ರೀಯೆಯಲ್ಲಿ ಭಾಗವಹಿಸಿ ದೇಶವನ್ನು ಕಟ್ಟುವ ಕೆಲಸದಲ್ಲಿ ನಿರತರಾಗಲು ಕರೆ ನೀಡಿದರು. ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದವರು ತಮ್ಮ ಮತಗಟ್ಟೆ ವಿವರ ತಿಳಿಯಲು ಮೊಬೈಲ್ ಎಸ್.ಎಮ್.ಎಸ್ ಏಂಇಕಅ ಎಂದು ಟೈಪಿಸಿ ಒಂದು ಸ್ಪೇಸ್ ಬಿಟ್ಟು ತಮ್ಮ ಇಕಅ ಕಾರ್ಡ ನಂಬರ ನಮೂದಿಸಿ "9731979899"ಗೆ ಕಳುಹಿಸುವ ಮೂಲಕ ವಿವರ ಪಡೆಯಬಹುದೆಂದು ಮಾಹಿತಿ ನೀಡಿದರು.
ಶಶಿಧರ. ಕುರೇರ್ ಮಾಹಾನಗರ ಪಾಲಿಕೆ ಆಯುಕ್ತರೊಂದಿಗೆ ಅನಗೋಳದ ಹರಿಜನ ಕೇರಿಗೆ ಭೆೇಟಿ ನೀಡಿ ಯುವ ಮತದಾರರು ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು ನೊಂದಾಯಿಸಿಕೊಳ್ಳಲು ತಿಳುವಳಿಕೆ ನೀಡಿದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 