ಎನ್ ಆರ್ ಸಿ ವಿರುದ್ಧ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ
ಬೆಂಗಳೂರು,
ಡಿ.28 ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ
ಕಾಯ್ದೆಯು ಕೋಮುವಾದದಿಂದ ಕೂಡಿದ್ದು ಇದರ ವಿರುದ್ಧ
ನಾಗರಿಕ ಅಸಹಕಾರ ಚಳುವಳಿಯೊಂದಿಗೆ ಇಂದಿನಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಕ್ಯಾಂಪಸ್ ಫ್ರಂಟ್
ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ವದಕತ್ ಶಾ ತಿಳಿಸಿದ್ದಾರೆ.ಇಂದು ಸುದ್ದಿಗೋಷ್ಠಿಯಲ್ಲಿ
ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯು ಭಾರತೀಯ ನಾಗರಿಕರ ಮೇಲೆ ದುಷ್ಪರಿಣಾಮ ಬೀರಲಿದೆ.
ದೇಶದಲ್ಲಿ ಮುಸ್ಲಿಮರನ್ನುಹತ್ತಿಕ್ಕುವ ಷಡ್ಯಂತ್ರ ಇದಾಗಿದ್ದು, ನಮ್ಮನ್ನು ದೇಶದಿಂದ ಹೊರದಬ್ಬುವ
ಕುತಂತ್ರವಾಗಿದೆ ಎಂದು ದೂರಿದರು.ದೇಶಾದ್ಯಂತ ಈ ಕಾಯ್ದೆಯ ವಿರುದ್ಧ ನಡೆಯುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು,
ಪ್ರತಿಭಟನೆಗಿಳಿದವರ ವಿರುದ್ಧ ಪೊಲೀಸರು ಕ್ರೂರರೀತಿಯ ದೌರ್ಜನ್ಯವೆಸಗುತ್ತಿದ್ದು, ಅವರ ಮೇಲೆ ಸುಳ್ಳು
ಪ್ರಕರಣಗಳನ್ನು ಹೇರಿ, ಗೋಲಿಬಾರ್ ಮಾಡುವ ಮೂಲಕ ಪ್ರತಿಭಟನಕಾರರನ್ನು ಹತ್ತಿಕ್ಕುತ್ತಿದ್ದಾರೆ ಎಂದುಆರೋಪಿಸಿದರು.ರಾಜ್ಯದಲ್ಲಿ
ಸಿಎಎ ವಿರುದ್ಧ ಹೋರಾಟ ಹೆಚ್ವಾಗುತ್ತಿರುವಾಗಲೇ ಗೃಹ ಸಚಿವರು ರಾಜ್ಯದಲ್ಲಿ ಜನವರಿ1 ರಿಂದ ಎನ್ ಆರ್
ಸಿ ಜಾರಿಗೆ ತರುವುದಾಗಿ ಹೇಳಿಕೆ ನೀಡಿದ್ದು,ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಿ ಎನ್ ಆರ್ ಸಿ
ಜಾರಿಗೆ ತರುವುದನ್ನು ಕೈ ಬಿಡಬೇಕೆಂದು ಒತ್ತಾಯಿಸಲಾಗುವುದು ಎಂದು ಹೇಳಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 