ಪಿಯುಸಿವರೆಗೂ ಆನ್ಲೈನ್ ಶಿಕ್ಷಣ ರದ್ದುಪಡಿಸಿ: ಸಿದ್ದರಾಮಯ್ಯ ಒತ್ತಾಯ
ಮೈಸೂರು, ಜೂನ್ 11, ಸರ್ಕಾರ ಕೇವಲ ಐದನೇ ತರಗತಿವರೆಗೆ ಮಾತ್ರ ಆನ್ಲೈನ್ ಶಿಕ್ಷಣ ರದ್ದು ಮಾಡದೇ ಪಿಯುಸಿವರೆಗೂ ಆನ್ ಲೈನ್ ಶಿಕ್ಷಣ ರದ್ದುಪಡಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.ಇಲ್ಲಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ಟೋಬರ್ ವರೆಗೂ ಶಾಲೆಗಳನ್ನು ಆರಂಭಿಸಬಾರದು. ಪ್ರಾಥಮಿಕ ಶಾಲೆಗಳಲ್ಲಿ ಆನ್ ಲೈನ್ ಶಿಕ್ಷಣ ರದ್ದುಪಡಿಸಿರುವುದು ಸ್ವಾಗತಾರ್ಹ ಎಂದರು.ಶಾಲೆಗಳಲ್ಲಿ ಪಾಠ ಕಲಿಯುವುದೇ ಬೇರೆ, ಆನ್ ಲೈನ್ ಶಿಕ್ಷಣವೇ ಬೇರೆ. ಶಾಲೆಗಳನ್ನು ಆರಂಭಿಸುವ ನಿಟ್ಟಿನಲ್ಲಿ ಎಚ್ಚರಿಕೆಯ ತೀರ್ಮಾನ ಮಾಡಬೇಕಿದೆ. ವಿದ್ಯಾರ್ಥಿಗಳು ಶಾಲೆಯಲ್ಲಿ ಅಧ್ಯಯನ ಮಾಡಬೇಕು. ಈ ಬಗ್ಗೆ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಬೇಕಿದೆ. ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಸಂಬಂಧ ಶಿಕ್ಷಣ ಸಚಿವರು ಅಗತ್ಯ ಕ್ರಮ ತೆಗೆದುಕೊಂಡು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಹೊರೆಯಾಗದಂತೆ ಅನುಕೂಲ ಕಲ್ಪಿಸಬೇಕಿದೆ ಎಂದು ಆಗ್ರಹಿಸಿದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 