ಪೆಹಲ್ಗಾಮ್ ದುರ್ಘಟನೆ ಪ್ರತಿರೋಧ ತೋರಿ ಕ್ಯಾಂಡಲ್ ಲೈಟ್ : ಮೃತರಿಗೆ ಮಕ್ಕಳ ಸ್ಕೇಟಿಂಗ್ ಮಾಡಿ ಗೌರವ ಅರೆ್ಣ
Candlelight vigil in protest against Pahalgam tragedy: Children's skating pays tribute to the deceas
ಪೆಹಲ್ಗಾಮ್ ದುರ್ಘಟನೆ ಪ್ರತಿರೋಧ ತೋರಿ ಕ್ಯಾಂಡಲ್ ಲೈಟ್ : ಮೃತರಿಗೆ ಮಕ್ಕಳ ಸ್ಕೇಟಿಂಗ್ ಮಾಡಿ ಗೌರವ ಅರೆ್ಣ
ಕಾರವಾರ 05: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬಲಿಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಎರಡು ಘಂಟೆಗಳ ಕಾಲ ನಗರದ ಮಿತ್ರ ಸಮಾಜದ ಆವರಣದಲ್ಲಿ ರವಿವಾರ ರಾತ್ರಿ ಪುಟಾಣಿಗಳು ಸ್ಕೇಟಿಂಗ್ ಮಾಡಿದರು.ಕಾರವಾರ ಮಿತ್ರ ಸಮಾಜದ ಆವರಣದ ಸ್ಕೇಟಿಂಗ್ ಕ್ಲಬ್ ನ ವತಿಯಿಂದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರನ್ನ ಸ್ಮರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕ್ಲಬ್ ನ ಸುಮಾರು 200 ಮಕ್ಕಳು ಕ್ಯಾಂಡಲ್ ಹಿಡಿದು ಭಾರತದ ಭೂಪಟ ಮಾಡಿ, ಅದರ ಸುತ್ತ ಸ್ಕೇಟಿಂಗ್ ಮಾಡುವ ಮೂಲಕ ಮೃತರನ್ನ ಸ್ಮರಿಸಿದರು.ಭಯೋತ್ಪಾದನಾ ವಿರೋಧಿ ಕಾರ್ಯಕ್ರಮಕ್ಕೆ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಮಕ್ಕಳ ಜೊತೆಗೆ ಕ್ಯಾಂಡಲ್ ಹಚ್ಚುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸತೀಶ್ ಸೈಲ್, ಭಯೋತ್ಪಾದಕರು, ದೇಶದಲ್ಲಿ ಹಿಂದು,ಮುಸ್ಲಿಮ ಪ್ರವಾಸಿಗರನ್ನು , ಇಟಲಿ, ಇಸ್ರೇಲ್ ವಿದೇಶದ ಪ್ರವಾಸಿಗರನ್ನು , ಸಾಯಿಸುವ ಮೂಲಕ ಹೇಯ ಕೃತ್ಯ ಮಾಡಿರುವುದು ಖಂಡನೀಯ ಎಂದರು.
ದೇಶದ ಸೈನ್ಯದ ಜೊತೆ, ದೇಶದ ಜೊತೆ ನಾವು ಸದಾ ಇದ್ದೇವೆ. ದೇಶದ ಭೂ, ನೌಕಾ, ವಾಯು ಸೈನ್ಯ ಉಗ್ರರಿಗೆ ತಕ್ಕ ಪಾಠ ಕಲಿಸಲಿದೆ. ನಮ್ಮಲ್ಲಿ ಇರುವ ಕದಂಬ ನೌಕಾದಳದ ಸೇಲರ್ಸ ಹೋರಾಡಲು ಸಿದ್ದರಾಗಿದ್ದು, ಇದು ನಮ್ಮ ಹೆಮ್ಮೆಯ ವಿಚಾರ ಎಂದರು.ಪ್ರವಾಸಕ್ಕೆಂದು ತೆರಳಿದ ಅಮಾಯಕರನ್ನ ಗುಂಡಿಕ್ಕಿ ಕೊಲ್ಲುವ ಮೂಲಕ ಉಗ್ರರು ತಮ್ಮ ಕ್ರೌರ್ಯ ತೋರಿಸಿದ್ದಾರೆ.
ನಾವೆಲ್ಲ ಭಾರತೀಯರು ಈ ಸಂದರ್ಭದಲ್ಲಿ ಒಂದಾಗಿರೋಣ. ಮೃತರ ಕುಟುಂಬದ ಜೊತೆ ಇರಬೇಕು. ಇಂತಹ ಕೃತ್ಯ ಮುಂದೆ ಆಗದಂತೆ ಸೈನ್ಯ ಕ್ರಮ ಕೈಗೊಳ್ಳುವ ವಿಶ್ವಾಸ ಇದೆ ಎಂದರು.ದೀಲೀಪ್ ಹಣಬರ್ ಮಾತನಾಡಿ ಏಪ್ರಿಲ್ 22 ರಂದು ನಡೆದ ಉಗ್ರರ ದಾಳಿಯ ನಂತರ ಅಕಾಡೆಮಿಯ ಮಕ್ಕಳು ಬೇಸರ ಗೊಂಡಿದ್ದು ಮಕ್ಕಳ ಒತ್ತಾಯದ ಮೇರೆಗೆ ಮೃತರನ್ನ ಸ್ಮರಿಸುವ ಕಾರ್ಯ ಮಾಡಲಾಗಿದೆ. ಇದೊಂದು ವಿಭಿನ್ನ ಕಾರ್ಯಕ್ರಮಎಂದರು.ಈ ಸಂಧರ್ಭದಲ್ಲಿ ಸಚ್ಚಿನ್ ದೇಸಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 