ಕಾನಹೊಸಹಳ್ಳಿ: ಲಾರಿ ಡಿಕ್ಕಿ ಇಬ್ಬರ ಸಾವು
ಕಾನಹೊಸಹಳ್ಳಿ 21: ಸಮೀಪದ ಇಮಾಡಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸೋಮವಾರ ಬೆಳಗ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಇಮಾಡಪುರ ಗ್ರಾಮದ ಆನಂದ (28) ಜಗದೀಶ್ (55) ಮೃತರು. ಗಾಯಗೊಂಡ ಟ್ರ್ಯಕ್ಟರ್ನಲ್ಲಿದ್ದ ಓಬಳೇಶ್ ಹಾಗೂ ಲಾರಿ ಚಾಲಕ ಶ್ರೀಶೈಲ, ಕ್ಲೀನರ್ ಶ್ರೀಕಾಂತರನ್ನು ದಾವಣಗೆರೆ ಆಸ್ಪತ್ರೆಗೆ ರವಾನಿಸಲಾಗಿದೆ. ಇಮಾಡಪುರದಿಂದ ಟ್ರ್ಯಕ್ಟರ್ನಲ್ಲಿ ಮೂವರು ರಾಗಿ ಹುಲ್ಲು ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾನಹೊಸಹಳ್ಳಿ ಮಾರ್ಗವಾಗಿ ಸಂಬಂಧಿಕರ ಊರಿಗೆ ಹೋಗುತ್ತಿದ್ದರು. ಈ ವೇಳೆ ಕೂಡ್ಲಿಗಿ ಕಡೆಯಿಂದ ಬಂದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಲಾರಿ ಚಾಲಕನ ನಿರ್ಲಕ್ಷೃವೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಘಟನೆ ಸ್ಥಳಕ್ಕೆ ಕೂಡ್ಲಿಗಿ ಡಿವೈಎಸ್ಪಿ ಶಿವಕುಮಾರ್, ಕಾನಹೊಸಹಳ್ಳಿ ಪಿಎಸ್ ಎಚ್.ನಾಗರಾಜ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 