ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದವರ ಕಾರು ಅಪಘಾತ: ಮೂವರು ಸಾವು
ಬಳ್ಳಾರಿ, ಫೆ 3, ತಂದೆಯ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದಾಗ ಮಗ, ಸೊಸೆ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ವಿರುಪಾಪುರ ಗ್ರಾಮದ ಬಳಿ ಸಂಭವಿಸಿದೆ. ಕಾರು ಹಾಗೂ ಟಿಪ್ಪರ್ ಲಾರಿ ಮುಖಾ ಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಸಂತ್ ಕುಮಾರ್(37), ಪತ್ನಿ ವಿನುತ(30) ಹಾಗೂ ಕಾರು ಚಾಲಕ ರವಿ ಮೃತಪಟ್ಟವರು. ಬಾಗಲಕೋಟೆ ಜಿಲ್ಲೆಯ ಇಳಕಲ್ ಮೂಲದವರಾದ ವಸಂತ್ ಕುಮಾರ್ ಮಡಿಕೇರಿಯ ಮೂರ್ನಾಡುನಲ್ಲಿ ಶಿಕ್ಷಕರರಾಗಿ ಸೇವೆ ಸಲ್ಲಿಸುತ್ತಿದ್ದರು. ಇಳಕಲ್ನಲ್ಲಿ ತಮ್ಮ ತಂದೆ ನಿಧನರಾದ ಹಿನ್ನೆಲೆಯಲ್ಲಿ ಶವಸಂಸ್ಕಾರಕ್ಕೆ ಪತ್ನಿ ವಿನುತ, ಮಗಳ ರುತ್ವಿಕಾ(2) ಜೊತೆ ವಸಂತ್, ಕಾರಿನಲ್ಲಿ ತೆರಳುವಾಗ ಈ ದುರ್ಘಟನೆ ನಡೆದಿದೆ. ಕೂಡ್ಲಿಗಿ ಪಟ್ಟಣದ ಅಂಬೇಡ್ಕರ್ ಸರ್ಕಾರಿ ಶಾಲೆಯ ಶಿಕ್ಷಕಿ ಮೋಕ್ಷಾವತಿ ಅಪಘಾತ ಸಂಭವಿಸಿದ ಸ್ಥಳದಿಂದ ತೆರಳುತ್ತಿದ್ದರು. ಈ ವೇಳೆ ಹೆತ್ತ ತಂದೆ, ತಾಯಿಯನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದ ರುತ್ವಿಕಾಳನ್ನು ಆಸ್ಪತ್ರಗೆ ಕರೆತಂದು, ಮಗುವಿಗೆ ಹಾಲುಣಿಸಿ ಮಾನವೀಯತೆ ಮೆರೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 